Malenadu Mitra
ಶಿವಮೊಗ್ಗ

ಕೈದಿಗಳಿಗೆ ಆರೋಗ್ಯ ತಪಾಸಣೆ


ಶಿವಮೊಗ್ಗರೋಟರಿ ಪೂರ್ವ ಸಂಸ್ಥೆ ಹಾಗೂ ಸಂಗಮ್ ಹೆಲ್ತ್ ಕೇರ್ ಆಸ್ಪತ್ರೆಗಳ ಸಹಯೋಗದಲ್ಲಿ ಭಾನುವಾರ ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಸುಮಾರು ೨೨೦ ಕೈದಿಗಳು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸೂಕ್ತ ಔಷಧಿ ಮತ್ತು ಸಲಹೆ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಜೈಲಿನ ಮುಖ್ಯ ಅಧೀಕ್ಷಕ ಡಾ.ರಂಗನಾಥ್, ಎಎಸ್ ಶಿವಾನಂದಶಿವಪುರೆ, ಜೈಲರ್ ಗಳಾದ ಅನಿಲ್‌ಕುಮಾರ್ ಎಸ್.ಎಸ್. ಮಹೇಶ್, ರೋಟರಿ ಸಂಸ್ಥೆಯ ವಿಜಯ್‌ಕುಮಾರ್, ವಸಂತ್, ಮಂಜುನಾಥ್ ಕದಂ, ಅರುಣ್ ಧೀಕ್ಷಿತ್ ಭಾಗಹಿಸಿದ್ದರು. ವೈದ್ಯರಾದ ಡಾ.ವರುಣ್, ಡಾ.ಚರಣ್, ಡಾ.ರಶ್ಮಿ, ಡಾ. ಅನುಷಾ ,ಡಾ. ದ್ಯಾಮನಗೌಡ ತಂಡ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು.

Ad Widget

Related posts

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ತುಂಗಾ ಚಾನಲ್ ನಲ್ಲಿ ಮುಳುಗಿದ್ದ ಬಾಲಕ ಶವವಾಗಿ ಪತ್ತೆ

Malenadu Mirror Desk

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.