Malenadu Mitra
ಶಿವಮೊಗ್ಗಸಾಗರ

ಮಾಸ ನಂಜುಂಡಸ್ವಾಮಿಗೆ ಸನ್ಮಾನ

ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ, ನೌಕರರ ಸಂಗದ ಜಿಲ್ಲಾಧ್ಯಕ್ಷ ಮಾ.ಸ.ನಂಜುಂಡಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಆರೋಗ್ಯ ಇಲಾಖೆ ಎಲ್ಲಾ ನೌಕರರು ಕೊರೊನದಂತಹ ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ವೈದ್ಯರಂತೆ ಉಳಿದ ನೌಕರರಿಗೂ ಸರಕಾರ ಸೂಕ್ತ ವೇತನ ಮತ್ತು ಭತ್ಯೆ ನೀಡಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷ ವಹಿಸಿದ್ದ ಮೆಗ್ಗಾನ್ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಮಾತನಾಡಿ, ಆರೋಗ್ಯ ಇಲಾಖೆ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿದೆ. ನೌಕರರ ಪರ ಅನೇಕ ಕೆಲಸ ಕಾರ್ಯಕ್ರಮ ಮಾಡುತ್ತಿದೆ. ಇಲ್ಲಿ ಅಧಿಕಾರಿಗಳು ಮತ್ತು ನೌಕರರೆಂಬ ಬೇಧವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿ.ಪ್ರಭಾಕರ್, ವೈ.ಜೆ.ಶಶಿಕುಮಾರ್, ನಿಂಗರಾಜ್, ಮಲ್ಲಿಕಾರ್ಜುನ್, ವಿ.ಲಕ್ಷö್ಮಣ್, ಚಂದ್ರಮತಿ ಹೆಗ್ಡೆ ಮತ್ತಿತರರಿದ್ದರು. ಶ್ರೀಮತಿ ವಂದನಾ ಸ್ವಾಗತಿಸಿದರೆ, ಅನ್ನಪೂರ‍್ಣ ನಿರೂಪಿಸಿ, ಮಮತಾ ಎಲ್ಲರನ್ನೂ ವಂದಿಸಿದರು.

Ad Widget

Related posts

ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ

Malenadu Mirror Desk

ಬಂಗಾರಪ್ಪ ಎಂಬ ಬಂಡಾಯದ ನಿಜನಾಯಕ, ಬಡವರ ಬಂಧು,ವರ್ಣರಂಜಿತ ರಾಜಕಾರಣಿ

Malenadu Mirror Desk

ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.