Malenadu Mitra
ರಾಜ್ಯ

ಕಡ್ಜಿರ ಕಚ್ಚಿ ಯುವಕ ಸಾವು

ತೀರ್ಥಹಳ್ಳಿ ಹುಲಿ ಕಡಜಲು ಹುಳ ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ಮಂಡ ಗದ್ದೆ ಸಿಂಗನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಭವಿಸಿದೆ.ಕೀಗಡಿ ಜಯರಾಮ ಗೌಡರ ಪುತ್ರ ಅಖಿಲೇಶ್(39) ಹುಲಿ ಕಡಜಲು ಹುಳ(ಜೇನಿನ ಮಾದರಿ ಗೂಡು ಕಟ್ಟುವ ಹುಳು, ಬಂಡಾರ ಬಡ್ಕಿ ಅಂತಾನು ಅಂತಾರೆ) ಕಚ್ಚಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲಿದ್ದ ಅಖಿಲೇಶ್ ಕೊರನಾ ಹಿನ್ನೆಲೆ ಊರಿಗೆ ಮರಳಿದ್ದರು. ಭಾನುವಾರ ಮನೆಯಲ್ಲಿ ಕೊನೆ ತೆಗೆಯುವ ವೇಳೆ ತೋಟಕ್ಕೆ ಹೋಗಿದ್ದಾಗ ಹುಳಗಳು ಕಚ್ಚಿವೆ. ಸುಮಾರು 50 ಕ್ಕೂ ಹೆಚ್ಚು ಕಡ್ಜಿರಾ ಅಖಲೇಶ್ ರನ್ನ ಕಚ್ಚಿದೆ ಎಂದು ತಿಳಿದು ಬಂದಿದೆ.ಅಖಿಲೇಶ್ ಗೆ ಬಾಯಿಂದ ನೊರೆ ಬಂದಿದೆ. ಮೆಗ್ಗಾನ್ ಗೆ ಸಾಗಿಸುವ ವೇಳೆ ಅವರು ಸಾವನ್ನು ಕಂಡಿದ್ದು ತಂದೆಯ ಎದುರೇ ಈ ದುರಂತದ ಘಟನೆ ನಡೆದಿದೆ! ಅಖಿಲೇಶ್ ವಿವಾಹಿತರಾಗಿದ್ದು,ಪತ್ನಿ, 2 ತಿಂಗಳ ಪುಟ್ಟ ಮಗು ಇದೆ

Ad Widget

Related posts

ಭಾವುಕ ಲೋಕ ಸೃಷ್ಟಿಮಾಡಿದ್ದ ಗುರುವಂದನೆ, ಶಿಷ್ಯವೃಂದದ ಗೌರವ ಸ್ವೀಕರಿಸಿ ಪುನೀತರಾದ ಗುರುಗಳು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಂದ ಹೃದಯ ಸ್ಪರ್ಶಿ ಕಾರ್ಯಕ್ರಮ

Malenadu Mirror Desk

ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಮನವಿ

Malenadu Mirror Desk

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.