ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.
ಸದಾನಂದ ಗೌಡ ಅವರನ್ನು ಜೀರೊ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು.
ಸಚಿವರು ಚೇತರಿಸಿಕೊಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಸದಾನಂದ ಗೌಡ ಅವರು ಬೆಂಗಳೂರಿನಿಂದ ಚಿತ್ರದುರ್ಗ ಮಾರ್ಗವಾಗಿ ಶಿವಮೊಗ್ಗಕ್ಕೆ ಬಂದು ಸಭೆಯಲ್ಲಿ ಭಾಗವಹಿಸಿದ್ದರು.
previous post
next post


