Malenadu Mitra
ರಾಜಕೀಯರಾಜ್ಯ

ಸದಾನಂದ ಗೌಡ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.
ಸದಾನಂದ ಗೌಡ ಅವರನ್ನು ಜೀರೊ ಟ್ರಾಫಿಕ್‍ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು.
ಸಚಿವರು ಚೇತರಿಸಿಕೊಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಸದಾನಂದ ಗೌಡ ಅವರು ಬೆಂಗಳೂರಿನಿಂದ ಚಿತ್ರದುರ್ಗ ಮಾರ್ಗವಾಗಿ ಶಿವಮೊಗ್ಗಕ್ಕೆ ಬಂದು ಸಭೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ವೀರಶೈವ-ಲಿಂಗಾಯತ ಸಮಾಜದಿಂದ ನೆರವು ,ನೊಂದ ಕುಟುಂಬದ ಬೆಂಬಲಕ್ಕೆ ಬರಲು ಎಸ್.ಪಿ.ದಿನೇಶ್ ಮನವಿ

Malenadu Mirror Desk

ಎನ್.ಡಿ.ಸುಂದರೇಶ್ ಆದರ್ಶಗಳು ರೈತ ಸಂಘಕ್ಕೆ ಜೀವಾಳವಾಗಬೇಕು: ಬಡಗಲಪುರ ನಾಗೇಂದ್ರ

Malenadu Mirror Desk

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.