Malenadu Mitra
ರಾಜ್ಯ

ಗೋಮಾತೆಗೆ ಪೂಜೆ ಸಲ್ಲಿಸಿ ಹತ್ಯೆ ನಿಷೇಧ ಕಾನೂನು ಜಾರಿ ಘೋಷಣೆ

ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಯಾವ ಕಾರಣಕ್ಕೂ ಗೋ ಹತ್ಯೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಗೋ ಹತ್ಯೆ ನಿಷೇಧ ವಿಧೇಯಕವನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಸೋಮವಾರ ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಯಡಿಯೂರಪ್ಪ ಅವರು ಗೋ ಪೂಜೆ ನೆರವೇರಿಸಿ ಸರಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಘೋಷಿಸಿದ್ದಾರೆ.

Ad Widget

Related posts

ರಾಜ್ಯಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Malenadu Mirror Desk

ಯಡಿಯೂರಪ್ಪ ಮನೆಗೆ ಮುತ್ತಿಗೆ ಕಲ್ಲು ತೂರಾಟ,ಲಾಠಿ ಪ್ರಹಾರ
ಮೀಸಲಾತಿ ಮರುಹಂಚಿಕೆಗೆ ಆಕ್ರೋಶ

Malenadu Mirror Desk

ಶಿವಮೊಗ್ಗದಲ್ಲಿ ಆ. 20 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸ್ತರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.