Malenadu Mitra
ರಾಜ್ಯ

ಗೋಮಾತೆಗೆ ಪೂಜೆ ಸಲ್ಲಿಸಿ ಹತ್ಯೆ ನಿಷೇಧ ಕಾನೂನು ಜಾರಿ ಘೋಷಣೆ

ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಯಾವ ಕಾರಣಕ್ಕೂ ಗೋ ಹತ್ಯೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಗೋ ಹತ್ಯೆ ನಿಷೇಧ ವಿಧೇಯಕವನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಸೋಮವಾರ ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಯಡಿಯೂರಪ್ಪ ಅವರು ಗೋ ಪೂಜೆ ನೆರವೇರಿಸಿ ಸರಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಘೋಷಿಸಿದ್ದಾರೆ.

Ad Widget

Related posts

ಅನುಕಂಪದ ಅಲೆಯಲ್ಲಿ ಕಿಮ್ಮನೆ, ಅಧಿಕಾರದ ಪ್ರಭಾವಳಿಯಲ್ಲಿ ಆರಗ, ಬುದ್ದಿವಂತರ ಮತಕ್ಷೇತ್ರದಲ್ಲಿ ಕುತೂಹಲ ಘಟ್ಟದಲ್ಲಿ ರಣಕಣ

Malenadu Mirror Desk

ಯಾವತ್ತೂ ನೊಂದವರ ಪರ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅಭಿಪ್ರಾಯ

Malenadu Mirror Desk

ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.