Malenadu Mitra
ಬೇಸಾಯಶಿವಮೊಗ್ಗ

ಅಡಿಕೆ ಕಳ್ಳರು ಅಂದರ್, ಕದ್ದದ್ದು ಎಷ್ಟು ಗೊತ್ತಾ ?

ಶಿವಮೊಗ್ಗ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು ಐದು ಅಡಿಕೆ ಕಳ್ಳತನ ಪ್ರಕರಣಗಳನ್ನು ಬೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ಹತ್ತು ಕ್ವಿಂಟಾಲ್ ಅಡಿಕೆ ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ತೌಸಿಫ್ ಉಲ್ಲಾ,ಮಹಾಪೂಸ್, ಅಜೀಜ್ ಉಲ್ಲಾಖಾನ್ ಎಂಬ ತುಂಗಾನಗರ ಹಾಗೂ ಆರ್‌ಎಂಲ್ ನಗರದ ಆರೋಪಿಗಳನ್ನು ಬಂಧಿಸಲಾಗಿದೆ. ಎಸ್ಪಿ ಕೆ.ಎಂ.ಶಾಂತರಾಜ್ , ಅಡಷನಲ್ ಎಸ್ಪಿ ಶೇಖರ್, ಡಿವೈಎಸ್ಪಿ ಈಶ್ವನಾಯ್ಕ ಅವರ ಮಾರ್ಗದರ್ಶನದಲ್ಲಿ ಸಿಪಿಐ ದೀಪಕ್, ಪಿಎಸ್‌ಐ ತಿರುಮಲೇಶ್ ತಂಡ ಈ ಕಾರ್ಯಾಚರಣೆ ಮಾಡಿದೆ. ಸಿಬ್ಬಂದಿಗಳಾದ ಸಯ್ಯದ್ ಇಮ್ರಾನ್, ರಾಜು, ಗುರುನಾಯಕ್, ಲಂಕೇಶ್ ಕುಮಾರ್ ಹಾಗೂ ಅರುಣ್ ಕುಮಾರ್ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಡಸ್ಟರ್ ಕಾರು ಹಾಗೂ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಇವರು ಕದ್ದಿರುವ ಅಡಿಕೆ ಮೌಲ್ಯ ಸುಮಾರು 4,25000 ಎಂದು ಅಂದಾಜಿಸಲಾಗಿದೆ

Ad Widget

Related posts

ಮುಸ್ಲಿಮರಿಗೆ  ಸೌಲಭ್ಯ ನೀಡಿಲ್ಲ ಎಂದಾದರೆ ರಾಜಕೀಯ ನಿವೃತ್ತಿ,
ಶಿಕಾರಿಪುರಕ್ಕೆ ಪರಿವಾರ ಸಮೇತ ಬಂದ ಯಡಿಯೂರಪ್ಪ., ಮುಸ್ಲಿಮರು, ಬಂಜಾರರ ಮನವೊಲಿಕೆ, ಮಗನ ಪರ ವಕಾಲತು

Malenadu Mirror Desk

ಅರಣ್ಯ ಹಕ್ಕು ಕಾಯ್ದೆ ದಾಖಲೆ ಅವಧಿ ವಿನಾಯಿತಿಗೆ ಪ್ರಸ್ತಾವನೆ, ಸಿಎಂ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಾಮರ್ಶೆ

Malenadu Mirror Desk

ಕಾಲೇಜಿಗೆ ಬಂದಿದ್ದ ಬಣ್ಣದ ಚಿಟ್ಟೆಗಳು ಚೆಲುವಿನ ಚಿತ್ತಾರ ಬಿಡಿಸಿದ್ದವು…

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.