Malenadu Mitra
ರಾಜ್ಯಶಿವಮೊಗ್ಗ

ಎಸಿಬಿ ಬಲೆಗೆ ಎಂಜಿನಿಯರ್

ಗಂಗಾ ಕಲ್ಯಾಣ ಬೋರ್‌ವೆಲ್‌ಗೆ ಟಿ.ಸಿ ಹಾಕಲು 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭದ್ರಾವತಿ ತಾಲೂಕು ಆನವೇರಿಯ ಹರೀಶ್ ಎನ್. ಎಂಬುವರು ಪ್ರಕಾಶ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಎಸಿಬಿ ಪೊಲೀಸರ್ ಗುರುವಾರ ಹೊಳೆಹೊನ್ನೂರಿನ ತಮ್ಮ ಕಚೇರಿಯಲಿ ಲಂಚ ಸ್ವೀಕರಿಸುವಾಗ ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಸಿಬಿ ಡೈವೈಎಸ್ಪಿ ಲೋಕೇಶ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ  ಸಿಪಿಐ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ,ರಘುನಾಯ್ಕ, ನಾಗರಾಜ್, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಭಾಗವಹಿಸಿದ್ದರು.

Ad Widget

Related posts

ದುರಾಡಳಿತ, ಕುಟುಂಬ ರಾಜಕಾರಣದ ವಿರುದ್ಧ ಸ್ಪರ್ಧೆ,ಸಮಾಜವಾದಿ ಪಕ್ಷದಿಂದ ವಿ.ಜಿ.ಪರಶುರಾಮ್ ನಾಮಪತ್ರ ಸಲ್ಲಿಕೆ

Malenadu Mirror Desk

ನಿರಂತರ ಜ್ಯೋತಿ ಭ್ರಷ್ಟಾಚಾರ ಸಿಬಿಐ ತನಿಖೆಯಾಗಲಿ: ಮಾಜಿ ಶಾಸಕ ಪ್ರಸನ್ನಕುಮಾರ್ ಆರೋಪ

Malenadu Mirror Desk

ಜನರ ಪ್ರೀತಿಯಿಂದ ಕಾಂಗ್ರೆಸ್ ಗಟ್ಟಿಗೊಳಿಸೋಣ ,ಕುಂಸಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಧುಬಂಗಾರಪ್ಪ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.