Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಡ್ಯಾನ್ಸ್ ಮಾಸ್ಟರ್ ಕೊಲೆ

ಕುಡಿದ ಮತ್ತಲ್ಲಿ ಕೊರಿಯೊಗ್ರಾಫರ್ ಕೊಲೆ ಮಾಡಿದ ದುಷ್ಕರ್ಮಿಗಳು
ಶಿವಮೊಗ್ಗದ ಸುಂದರ ಆಶ್ರಯ ಹೋಟೆಲ್ ಬಳಿ ಕುಡಿದ ಮತ್ತಿನಲ್ಲಿ ಪಡ್ಡೆಹುಡುಗರ ಗ್ಯಾಂಗ್ ಒಂದು ಕೆಆರ್‌ಪುರಂ ರಸ್ತೆ ನಿವಾಸಿ ಕೊರಿಯೊಗ್ರಾಫರ್ ಜೀವನ್(೨೬) ಎಂಬಾತನನ್ನು ಕೊಲೆ ಮಾಡಿದೆ. ಜೀವನ್ ಮಿತ್ರ ಕೇಶವ್ ಶೆಟ್ಟಿ (೨೭)ಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬುಧವಾರ ರಾತ್ರಿ ಸುಂದರ ಆಶ್ರಯ ಹೋಟೆಲ್‌ಗೆ ಬಂದಿದ್ದ ಪಡ್ಡೆಗಳ ಗುಂಪು ಅದೇ ಹೋಟೆಲ್‌ನಲ್ಲಿ ಊಟಕ್ಕೆ ಬಂದಿದ್ದ ಕೇಶವ್ ಹಾಗೂ ಜೀವನ್ ಜತೆ ಕಿರಿಕ್ ಮಾಡಿಕೊಂಡಿದೆ. ಊಟ ಮುಗಿದ ಬಳಿಕ ಅಲ್ಲೇ ತಳ್ಳಾಡಿಕೊಂಡಿದೆ. ಜೀವನ್ ಹಾಗೂ ಕೇಶವ್ ತಪ್ಪಿಸಿಕೊಂಡು ಹೋಗುವಾಗ ಹೋಟೆಲ್‌ನ ಕೆಳಭಾಗಕ್ಕೆ ಬಂದ ಗುಂಪು ಮತ್ತೆ ಅಟ್ಯಾಕ್ ಮಾಡಿದೆ. ಈ ಸಂದರ್ಭ ಚಾಕು ಇರಿತಕ್ಕೊಳಗಾದ ಡ್ಯಾನ್ಸ್ ಮಾಸ್ಟರ್ ಜೀವನ್ ಸಾವಿಗೀಡಾಗಿದ್ದು, ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಕೇಶವ್ ಗಾಯಗೊಂಡಿದ್ದಾನೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ದೊಡ್ಡಪೇಟೆ ಸಿಪಿಐ ವಸಂತ್‌ಕುಮಾರ್ ,ಪಿಎಸೈ ಶಂಕರ್‌ಮೂರ್ತಿ ಸ್ಥಳಕ್ಕೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Ad Widget

Related posts

ಡಿಸೆಂಬರ್ 28,29, ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ.

Malenadu Mirror Desk

ಮಲೆನಾಡಲ್ಲಿ ಮಳೆಯ ಸಂಭ್ರಮ, ಜೋಗದಲ್ಲಿ ಜಲ ಚಿತ್ತಾರ, ಪ್ರವಾಸಿಗರ ಹರ್ಷ

Malenadu Mirror Desk

ಅವೈಜ್ಞಾನಿಕ ನೀರಿನ ಬಿಲ್ ಕಟ್ಟಬೇಡಿ: ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.