Malenadu Mitra
ರಾಜ್ಯಶಿವಮೊಗ್ಗ

ಬಸ್ ಡಿಕ್ಕಿ ; ಯುವಕ,ಯುವತಿ ಸಾವು

ಶಿವಮೊಗ್ಗ ಸಮೀಪದ ಮೇಲಿನ ಹನಸವಾಡಿ ಸಮೀಪ ಕಾರು ಹಿಂದಿಕ್ಕಲು ಹೋದ ಬೈಕ್ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ದುರ್ಮರಣಕ್ಕೀಡಾದ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು ಹಾಗೂ ಸುಮ ಮೃತ ದುರ್ದೈವಿಗಳು. ಹನಸವಾಡಿ ಸಮೀಪ ಘಟನೆ ಸಂಭವಿಸಿದ್ದು, ಕಾರನ್ನು ಹಿಂದಿಕ್ಕಿ ಮುಂದೆ ಸಾಗುವಾಗ ದಾವಣೆಗೆರೆಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಸಿಪಿಐ ಹಾಗೂ ಕೆಎಸ್‌ಆರ್‌ಟಿಸಿ ಡಿಪೊ ಮ್ಯಾನೇಜರ್ ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆಯಲ್ಲ ದೂರು ದಾಖಲಾಗಿದೆ.

Ad Widget

Related posts

ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು

Malenadu Mirror Desk

ಮಧುಬಂಗಾರಪ್ಪರ ಹೋರಾಟದ ಫಲವಾಗಿ ಸೊರಬ -ಶಿಕಾರಿಪುರಕ್ಕೆ ನೀರಾವರಿ

Malenadu Mirror Desk

ಲಿಂಗನಮಕ್ಕಿ ಡ್ಯಾಂನಿಂದ ನೀರು, ಜೋಗ ಮತ್ತಷ್ಟು ರಮಣೀಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.