Malenadu Mitra
ರಾಜ್ಯಶಿಕಾರಿಪುರ

ಕಳ್ಳಭಟ್ಟಿ ಕೊಳೆ ನಾಶ

ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡಾದ ಜವಳೆಕಟ್ಟೆ ಕೆರೆ ಮತ್ತು ಕೆರೆಕಟ್ಟೆ ಗ್ರಾಮದ ಕೆರೆದಡದಲ್ಲಿ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಅಧಿಕಾರಿಗಳು 315 ಲೀಟರ್ ಕೊಳೆಯನ್ನು ನಾಶಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲಿದ್ದ ಆರೋಪಿಗಳೆಲ್ಲಾ ಪರಾರಿಯಾಗಿದ್ದಾರೆ. ಅಬಕಾರಿ ನಿರೀಕ್ಷಕ ಹನುಮಂತಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಾಗಡಿ ತಾಂಡಾದಲ್ಲಿ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್‌ಕುಮಾರ್ ನೇತ್ವತ್ವದಲ್ಲಿ ಕಳ್ಳಭಟ್ಟಿ ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಲಾಯಿತು. ಕಳ್ಳಭಟ್ಟಿ ತಯಾರಕರ ಬಗ್ಗೆ ಇಲಾಖೆಗೆ ಮಾಹಿತಿ ನೀಡುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.

Ad Widget

Related posts

ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ  ಸಿ.ಟಿ. ರವಿಗೆ ಇಲ್ಲ : ಬೇಳೂರು ಗೋಪಾಲ ಕೃಷ್ಣ

Malenadu Mirror Desk

ಸಾಮಾಜಿಕ,ರಾಜಕೀಯ ಹೋರಾಟ ಮಾಡಿ ಆದರೆ ಯಾರ ಗುಲಾಮರಾಗಬೇಡಿ, ಈಡಿಗ ಸಮಾಜದ ಯುವಕರಿಗೆ ವಿಖ್ಯಾತಾನಂದ ಸ್ವಾಮೀಜಿ ಕಿವಿಮಾತು

Malenadu Mirror Desk

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.