Malenadu Mitra
ರಾಜ್ಯಶಿವಮೊಗ್ಗ

ಅಯ್ಯಪ್ಪಸ್ವಾಮಿ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ

ಶಿವಮೊಗ್ಗ ನಗರದ ಗೋಪಾಳ ರಂಗನಾಥ ಸ್ವಾಮಿ ಬಡಾವಣೆಯಲ್ಲಿ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಅಯ್ಯಪ್ಪ ಸ್ವಾಮಿಯ ನೂತನ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನೆ ಮಹೋತ್ಸವ ಇಂದು ಮತ್ತು ನಾಳೆ ನಡೆಯಲಿದೆ.
ದೇವಸ್ಥಾನ ಆಡಳಿತಮಂಡಳಿ ಅಧ್ಯಕ್ಷ ಸುರೇಶ್ ಕೆ ಬಾಳೆಗುಂಡಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ದೇವಸ್ಥಾನವನ್ನು ೧.೨೦ ಕೋಟಿ ರೂ. ವೆಚ್ಚದಲ್ಲಿ ದಏಗುಲ ಅಭಿವೃದ್ಧಿ ಮಾಡಲಾಗಿದೆ. ಈ ಭಾಗದಲ್ಲಿ ಅಯ್ಯಪ್ಪ ಸ್ವಾಮಿಯ ಪಂಚಲೋಹ ವಿಗ್ರಹ ಅಪರೂಪವಾಗಿದೆ. ಐದು ಲಕ್ಷ ರೂ. ವೆಚ್ಚದಲ್ಲಿ ವಿಗ್ರಹ ಸಿದ್ದಪಡಿಸಿದೆ. ಮೊದಲ ದಿನ ಕೊಪ್ಪ ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ್ ಗುರೂಜಿ ಅವರು ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ರವೀಂರಭಟ್ ಹಾಗೂ ಮಂಜುನಾಥ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆ.೨೧ ರಂದು ಬೆಳಗ್ಗೆ ೧೧ ಕ್ಕೆ ಸಭಾ ಕಾರ್ಯಕ್ರಮದಲ್ಲಿ ವಿನಯ್ ಗುರೂಜಿ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ ಗುರುಸ್ವಾಮಿ ರೋಜಾ ಷಣ್ಮುಗಂ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಪಾಲಿಕೆ ಸದಸ್ಯ ಮಂಜುನಾಥ್ ಮತ್ತಿರರು ಬಾಗವಹಿಸಲಿದ್ದಾರೆ ಎಂದು ಸುರೇಶ್ ಮಾಹಿತಿ ನೀಡಿದ್ದಾರೆ, ಬಿ.ಸಿರಾಜಣ್ಣ, ಗೋಪಾಲಕೃಷ್ಣ, ಸುರೇಶ್ ಬಾಬು, ರುದ್ರೇಗೌಡ ಮತ್ತಿತರರು ಇದ್ದರು.

Ad Widget

Related posts

ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

Malenadu Mirror Desk

ಈಶ್ವರಪ್ಪರ ರಾಜಕಾರಣಕ್ಕೆ ಹಿಂದೂಗಳ ಬಲಿಯಾಗಬೇಕಾ : ಕಾಂಗ್ರೆಸ್ ವಕ್ತಾರ ಕೆಬಿಪಿ ಪ್ರಶ್ನೆ

Malenadu Mirror Desk

ಜೀವ ಜಲ ಶುದ್ಧವಾಗಿರಲಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ , ಶ್ರೀ ಕ್ಷೇತ್ರ ಸಿಂಗದೂರಿನಲ್ಲಿ ಶರನ್ನವರಾತ್ರಿ ಉತ್ಸವದಲ್ಲಿ ಶ್ರೀಗಳ ಆಶೀರ್ವಚನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.