Malenadu Mitra
ರಾಜ್ಯಶಿವಮೊಗ್ಗ

ಬಿಎಸ್‌ವೈಗೆ ನಮ್ಮೊಲುಮೆಯ ಭಾವಾಭಿನಂದನೆ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜನ್ಮದಿನದ ನಿಮಿತ್ತ ಜಿಲ್ಲೆಯ ಸಮಸ್ತ ಜನರ ಪರವಾಗಿ `ನಮ್ಮೊಲುಮೆ’ಯ ಭಾವಾಭಿನಂದನೆಯನ್ನು ಫೆ.೨೮ ರಂದು ಸಂಜೆ ೬ ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಎಸ್. ರುದ್ರೇಗೌಡ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡಿ.ಎಸ್. ಶಂಕರಮೂರ್ತಿ ಅಭಿನಂದನಾ ನುಡಿಗಳನ್ನು ನುಡಿವರು. ಸಚಿವ ಕೆ.ಎಸ್. ಈಶ್ವರಪ್ಪರವರು ರಾಜಕಾರಣದ ತ್ರಿವಿಕ್ರಮ ಪುಸ್ತಕ ಬಿಡುಗಡೆ ಮಾಡುವರು. ಇವರ ಜೊತೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗಜ್ಞಾನೇಂದ್ರ, ಕುಮಾರ್‍ಬಂಗಾರಪ್ಪ, ಕೆ.ಬಿ.ಅಶೋಕ್‌ನಾಯ್ಕ್, ಆಯನೂರು ಮಂಜುನಾಥ್, ಭಾರತಿಶೆಟ್ಟಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಉಪಸ್ಥಿತರಿರುವರು ಎಂದರು.
ಡಿ.ಎಸ್.ಅರುಣ್ ಮಾತನಾಡಿ, ಮುಖ್ಯಮಂತ್ರಿಗಳ ಸನ್ಮಾನದ ನಂತರ ನಾಡಿನ ಹೆಸರಾಂತ ಗಾಯಕರಾದ ವಿಜಯ್‌ಪ್ರಕಾಶ್ ಹಾಗೂ ರಾಜೇಶ್‌ಕೃಷ್ಣನ್ ಅವರಿಂದ ವಿಶೇಷ ಸಂಯೋಜನೆಯ ಭಾವಾಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಅನುಶ್ರೀ ನಿರೂಪಣೆ ಮಾಡಲಿದ್ದಾರೆ ಎಂದರು.
ಮಾ.೧ ರಂದು ಸಂಜೆ ೬ ಗಂಟೆಗೆ ಇದೇ ಸ್ಥಳದಲ್ಲಿ ಆಳ್ವಾಸ್ ನುಡಿಸಿರಿ ತಂಡದವರಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ೨೫೦ ಕಲಾವಿದರು ಭಾಗವಹಿಸಲಿದ್ದು, ಈ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಡಾ.ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸುವರು.
ಈ ೨ ದಿನದ ಕಾರ್ಯಕ್ರಮದಲ್ಲಿ ಸುಮಾರು ೪೦ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ .ಎಸ್.ಜ್ಯೋತಿಪ್ರಕಾಶ್, ವಕೀಲ ಬಸಪ್ಪಗೌಡರು, ಟಿ.ಆರ್.ಅಶ್ವಥ್‌ನಾರಾಯಣ ಶೆಟ್ಟಿ, ಬಳ್ಳೆಕೆರೆ ಸಂತೋಷ್, ಲಕ್ಷ್ಮೀನಾರಾಯಣ ಕಾಶಿ, ರಮೇಶ್‌ಹೆಗ್ಡೆ, ಮಾಲತೇಶ್, ಹಿರಣ್ಣಯ್ಯ ಇನ್ನಿತರರು ಉಪಸ್ಥಿತರಿದ್ದರು. 

ReplyForward
Ad Widget

Related posts

ರಾಜ್ಯದ ಎಲ್ಲಾ ಮೆಡಿಕಲ್ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ,ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Malenadu Mirror Desk

ವಿದ್ಯುತ್ ಇಲ್ಲ – ದಸರಾಕ್ಕೆ ಅನುದಾನ ಇಲ್ಲ, ರಾಜ್ಯ ಸರ್ಕಾರದ ನಿಲುವಿಗೆ ಕೆ.ಬಿ. ಪ್ರಸನ್ನಕುಮಾರ್ ಖಂಡನೆ

Malenadu Mirror Desk

ಪರಿಶ್ರಮವಿದ್ದಲ್ಲಿ ಯಶಸ್ಸು: ಡಾ.ರಶ್ಮಿ ಪರಮೇಶ್, ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.