Malenadu Mitra
ರಾಜ್ಯಶಿವಮೊಗ್ಗ

ಯಾಗ ಶಾಲೆಗೆ ಸಿ ಎಂ ಭೂಮಿ ಪೂಜೆ

ಶಿವಮೊಗ್ಗದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ಶ್ರೀ ಮಾರುತಿ ಪ್ರತಿಷ್ಠಾನಂನ ಉದ್ದೇಶಿತ ಯಾಗಶಾಲೆ ಮತ್ತು ಭೋಜನಾಲಯದ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಿದ್ದಾರೆ. ಬೆಳ್ಳಿ ಇಟ್ಟಿಗೆ ಸಮರ್ಪಣೆಯೊಂದಿಗೆ ಸಿಎಂ ಪೂಜೆಗೆ ಚಾಲನೆ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು, ಬೆಳ್ಳಿ ಯಂತ್ರ ಸಮರ್ಪಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ದೇಗುಲ ಸಂಚಾಲಕ ಸುರೇಶ್ ಕೆ ಬಾಳೆಗುಂಡಿ ಹಾಗೂ ಧರ್ಮದರ್ಶಿ ರವೀಂದ್ರಭಟ್ ಕುಟುಂಬದವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶತರುದ್ರಯಾಗದ ಮೂಲಕ ಮುಖ್ಯಮಂತ್ರಿ ಅವರನ್ನು ಋತ್ವಿಜರು ಆಶೀರ್ವದಿಸಿದರು. ಈ ಸಂದರ್ಭ ಮುಖ್ಯ ಅವರಿಗೆ ಸ್ಫಟಿಕದ ಹಾರ ಹಾಕಿ ಗೌರವಿಸಲಾಯಿತು.ಈ ಸಂದರ್ಭ ಸಚಿವರಾದ ಬೈರತಿ ಬಸವರಾಜ್, ಶಾಸಕ ಆರಗ ಜ್ಞಾನೇಂದ್ರ ಮತ್ತಿತರರಿದ್ದರು.

Ad Widget

Related posts

ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು

Malenadu Mirror Desk

ಜಾತಿಗಳ ನಡುವೆ ವೈಷಮ್ಯ: ಸಚಿವರ ವಜಾಕ್ಕೆ ಆಗ್ರಹ

Malenadu Mirror Desk

ಜೂನ್ 1 ರಿಂದ ಆಯುಷ್ ವೈದ್ಯಾಧಿಕಾರಿಗಳ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.