Malenadu Mitra
ರಾಜ್ಯಶಿವಮೊಗ್ಗ

ಯಾಗ ಶಾಲೆಗೆ ಸಿ ಎಂ ಭೂಮಿ ಪೂಜೆ

ಶಿವಮೊಗ್ಗದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ಶ್ರೀ ಮಾರುತಿ ಪ್ರತಿಷ್ಠಾನಂನ ಉದ್ದೇಶಿತ ಯಾಗಶಾಲೆ ಮತ್ತು ಭೋಜನಾಲಯದ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಿದ್ದಾರೆ. ಬೆಳ್ಳಿ ಇಟ್ಟಿಗೆ ಸಮರ್ಪಣೆಯೊಂದಿಗೆ ಸಿಎಂ ಪೂಜೆಗೆ ಚಾಲನೆ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು, ಬೆಳ್ಳಿ ಯಂತ್ರ ಸಮರ್ಪಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ದೇಗುಲ ಸಂಚಾಲಕ ಸುರೇಶ್ ಕೆ ಬಾಳೆಗುಂಡಿ ಹಾಗೂ ಧರ್ಮದರ್ಶಿ ರವೀಂದ್ರಭಟ್ ಕುಟುಂಬದವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಶತರುದ್ರಯಾಗದ ಮೂಲಕ ಮುಖ್ಯಮಂತ್ರಿ ಅವರನ್ನು ಋತ್ವಿಜರು ಆಶೀರ್ವದಿಸಿದರು. ಈ ಸಂದರ್ಭ ಮುಖ್ಯ ಅವರಿಗೆ ಸ್ಫಟಿಕದ ಹಾರ ಹಾಕಿ ಗೌರವಿಸಲಾಯಿತು.ಈ ಸಂದರ್ಭ ಸಚಿವರಾದ ಬೈರತಿ ಬಸವರಾಜ್, ಶಾಸಕ ಆರಗ ಜ್ಞಾನೇಂದ್ರ ಮತ್ತಿತರರಿದ್ದರು.

Ad Widget

Related posts

ಕಟ್ಟಡ ಕಾರ್ಮಿಕರು ಸೌಲತ್ತುಗಳನ್ನು ಬಳಸಿಕೊಳ್ಳಬೇಕು

Malenadu Mirror Desk

ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯಕಾರಿಣಿ

Malenadu Mirror Desk

ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆಗೆ ಕಾನೂನು ಹೋರಾಟ, ಅರಣ್ಯ,ಕಂದಾಯ ಭೂಮಿ ಜಂಟಿ ಸರ್ವೆ,
ರಾಜ್ಯಸರಕಾರದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.