Malenadu Mitra
ರಾಜ್ಯಶಿವಮೊಗ್ಗಸಾಗರ

ಶಾಸಕ ಹಾಲಪ್ಪ ಜನ್ಮದಿನಾಚರಣೆ

ಸಾಗರ-ಹೊಸನಗರ ಕ್ಷೇತ್ರ ಶಾಸಕರು ಹಾಗೂ ಎಂಎಸ್‌ಎಲ್‌ಐ ಅಧ್ಯಕ್ಷರೂ ಆದ ಹರತಾಳು ಹಾಲಪ್ಪ ಅವರ ಜನ್ಮದಿನಾಚರಣೆಯನ್ನು ಅವರ ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ತಮ್ಮ ಊರುಗಳಲ್ಲಿನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ತಮ್ಮ ನೆಚ್ಚಿನ ನಾಯಕನಿಗೆ ಆಯುರಾರೋಗ್ಯ ಹಾಗೂ ರಾಜಕೀಯ ಯಶಸ್ಸು ಕೋರಿ ಪ್ರಾರ್ಥನೆ ಮಾಡಿದ್ದಾರೆ.
ಹೊಸನಗರ ರಾಮಚಂದ್ರಾಪುರ ಮಠದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಹೊಸನಗರ ಭಾಗದ ಅಭಿಮಾನಿಗಳು ಶ್ರೀ ಮಠದ ಗೋ ಶಾಲೆಗೆ ಮೇವು ಕೊಟ್ಟಿದ್ದಾರೆ ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಎಂಸಿಎ ನಿರ್ದೇಶಕ ಎಚ್.ಆರ್.ತೀರ್ಥೇಶ್, ಮೋಹನ್ ಮಂಡಾನಿ, ಮನೋಹರ, ಗುರುರಾಜ, ಬಸವರಾಜ್, ಚಾಳುಕ್ಯ ಮತ್ತಿತರಿದ್ದರು. ಅರಲುಗೋಡಿನಲ್ಲಿ ಗ್ರಾಮಸ್ಥರು ಅಲ್ಲಿನ ದೇವಾಲಯದಲ್ಲಿ ಹಾಲಪ್ಪರ ಜನ್ಮದಿನ ಅಂಗವಾಗಿ ಪೂಜೆ ಸಲ್ಲಿಸಲಾಯಿತು.
ಸಾಗರದಲ್ಲೂ ಹಾಲಪ್ಪ ಬೆಂಬಲಿಗರು ಹಾಗೂ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಹಾಲಪ್ಪ ಅವರನ್ನು ಭೇಟಿ ಮಾಡಿದ ಬೆಂಬಲಿಗರೂ ಹಿತೈಷಿಗಳು ಹುಟ್ಟು ಹಬ್ಬದ ಶುಭಾಶಯ ಕೋರಿದರು. ಹಾಲಪ್ಪ ದಂಪತಿ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿರುವ ಬ್ರಹ್ಮಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Ad Widget

Related posts

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಬಾಗ , ಶಿಖಂಡಿ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ ವಾಗ್ದಾಳಿ

Malenadu Mirror Desk

ಕಾಂಗ್ರೆಸ್‌ಗೆ ಸೋಲಿನ ಸುಳಿವು ಸಿಕ್ಕಿದೆ: ತೇಜಸ್ವಿ ಸೂರ್ಯ ಹೇಳಿಕೆ

Malenadu Mirror Desk

ಸುಳ್ಳು ಆರೋಪಗಳಿಗೆ ಹೆದರಬೇಕಿಲ್ಲ, ನಾನು ಧೈರ್ಯವಾಗಿದೀನಿ ನೀವೂ ಧೈರ್ಯವಾಗಿರಿ. ಮಠದ ಭಕ್ತರಿಗೆ ಮುರುಘಾ ಶ್ರೀ ಗಳಿಂದ ಸಾಂತ್ವನ.

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.