Malenadu Mitra
ಶಿವಮೊಗ್ಗ

ಪುರದಾಳು ಜಾತ್ರೆ, ಏನೆಲ್ಲಾ ವಿಶೇಷ ?

ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮಾ.೧೧ ಮತ್ತು ೧೨ ರಂದು ನಡೆಯಲಿದೆ. ಪ್ರತಿವರ್ಷ ಶಿವರಾತ್ರಿಗೆ ವಿಜೃಂಬಣೆಯ ಜಾತ್ರೆ ನಡೆಯಲಿದ್ದು, ಮೊದಲ ದಿನ ಬಸವೇಶ್ವರ ಸ್ವಾಮಿಯ ರಥೋತ್ಸವ ಜರುಗಲಿದೆ. ಗಂಗಾಪೂಜೆ, ರುದ್ರಾಭಿಷೇಕ ಮಹಾಮಂಗಳಾರತಿ ನಡೆಯಲಿದೆ, ಸಂಜೆ ೫.೩೦ಕ್ಕೆ ಸ್ವಾಮಿಯ ರಾಜಬೀದಿ ರಥೋತ್ಸವ ನೆರವೇರಲಿದೆ.
ರಾತ್ರಿ ೯.೩೦ಕ್ಕೆ ಶ್ರೀ ಬಸವೇಶ್ವರ ಯಕ್ಷಗಾನ ಮಂಡಳಿ ಪುರದಾಳು ಹಾಗೂ ಮಹಾಗಣಪತಿ ಯಕ್ಷಗಾನ ಮಂಡಳಿ ಕಿಲಾರ ಇವರ ಸಹಯೋಗದಲ್ಲಿ ಮಧುರ-ಮಹೇಂದ್ರ ಎಂಬ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ ಇರುತ್ತದೆ.

Ad Widget

Related posts

ಮಹಾ ಪಂಚಾಯತ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ

Malenadu Mirror Desk

ಗೀತಕ್ಕ ಸೋಲಿನ ಹೊಣೆ ನಾನೇ ಹೊರುವೆ , ಶಿವಮೊಗ್ಗದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ  

Malenadu Mirror Desk

ತಡರಾತ್ರಿ ಅಥವಾ ನಾಳೆ ಶಿವಮೊಗ್ಗ ಕ್ಷೇತ್ರ ಅಭ್ಯರ್ಥಿ ಘೋಷಣೆ : ಯಡಿಯೂರಪ್ಪ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.