Malenadu Mitra
ರಾಜ್ಯಶಿವಮೊಗ್ಗ

ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ.
ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ನಿರ್ಬಂದಿಸಿ ಆದೇಶಿಸಿದೆ. ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ. ಆದುದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

Ad Widget

Related posts

ತಹಶೀಲ್ದಾರ್‌ಗಳ ವರ್ಗಾವಣೆ ನಾನು ಮಾಡಿಸಿಲ್ಲ, ಸುಳ್ಳು ಆರೋಪ ಸರಿಯಲ್ಲ
ಶಾಸಕ ಕುಮಾರ ಬಂಗಾರಪ್ಪ ಹೇಳಿಕೆ

Malenadu Mirror Desk

ಸಿಗಂದೂರು ಗೂಡಂಗಡಿ, ಹೋಟೆಲ್‍ತೆರವು

Malenadu Mirror Desk

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್, ಶಿಕ್ಷಣ ಇಲಾಖೆ ಅಧಿಕಾರಿಗಳ ಮನವೊಲಿಕೆಗೆ ಕರಗದ ವಿದ್ಯಾರ್ಥಿನಿಯರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.