Malenadu Mitra
ರಾಜ್ಯಶಿವಮೊಗ್ಗ

ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ.
ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ನಿರ್ಬಂದಿಸಿ ಆದೇಶಿಸಿದೆ. ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ. ಆದುದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

Ad Widget

Related posts

ನನ್ನ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಕಾರಣ ; ಹರತಾಳು ಹಾಲಪ್ಪ

Malenadu Mirror Desk

ರಾಜ್ಯದ ಎಲ್ಲಾ ಮೆಡಿಕಲ್ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ,ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Malenadu Mirror Desk

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.