Malenadu Mitra
ರಾಜ್ಯಶಿವಮೊಗ್ಗ

ಕೃಷಿ ಕಾಯಿದೆ ಪ್ರತಿ ದಹಿಸಿ ಭಾರತ್ ಬಂದ್‍ಗೆ ಬೆಂಬಲ

ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯಿದೆ ರದ್ದು ಮಾಡಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಯಿತು.
ಪೂರ್ವ ನಿರ್ಧಾರದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡದೆ ಕೃಷಿ ಕಾಯಿದೆಯ ಪ್ರತಿಗಳನ್ನು ದಹಿಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಸಂಯಕ್ತ ಕಿಸಾನ್ ಮೋರ್ಚಾ, ಐಕ್ಯ ಕರ್ನಾಟಕ, ದಸಂಸ, ರಾಜ್ಯ ರೈತಸಂಘ ಹಾಗೂ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಈ ಸಂದರ್ಭ ರೈತ ಮುಖಂಡ ಎಚ್.ಆರ್.ಬಸವರಾಜಪ್ಪ, ಎಂ.ಶ್ರೀಕಾಂತ್, ಎನ್.ರಮೇಶ್, ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಪಲ್ಲವಿ, ಎಚ್.ಸಿ.ಯೋಗಿಶ್, ಕಾಶಿವಿಶ್ವನಾಥ್ , ಹಾಲೇಶಪ್ಪ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Ad Widget

Related posts

ವಕ್ಫ್ ಆಸ್ತಿ ವಿವಾದ : ಸಿಎಂ ಸ್ಥಾನವೇ ಹೋದಿತು – ಸಿದ್ದುಗೆ ಈಶ್ವರಪ್ಪ ಎಚ್ಚರಿಕೆ

Malenadu Mirror Desk

ಹಸೆ ಚಿತ್ತಾರ ಕಲೆಯ ಕುರಿತ ಮೊದಲ ಸಮಗ್ರ ಸಂಶೋಧನಾ ಕಾರ್ಯ ಶ್ಲಾಘನೀಯ: ಕಾಗೋಡು ತಿಮ್ಮಪ್ಪ

Malenadu Mirror Desk

ಕಾಂತರಾಜ್ ವರದಿ ಜಾರಿಗೆ ಶ್ರೀ ನಾರಾಯಣಗುರು ವಿಚಾರ  ವೇದಿಕೆ ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.