Malenadu Mitra
ರಾಜ್ಯಶಿವಮೊಗ್ಗ

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ

ಗಾಂಜಾ ಸಾಗಣೆ ಮಾಡುತ್ತಿದ್ದ ಐದು ಜನ ಆರೋಪಿಗಳನ್ನು ಶುಕ್ರವಾರ ಬಂಧಿಸಿ, ಅವರಿಂ ದ 1 ಕೆ.ಜಿ ಗಾಂಜಾ, 3 ತಲ್ವಾರ್‌ ಹಾಗೂ 2,585 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಅಣ್ಣಾನಗರದ ಅಬ್ದುಲ್‌ ಮುನಾಫ್‌(22), ಮಿಳ್ಳಘಟ್ಟದ ಅಸಾದಿ ಅಲಿಯಾಸ್‌ ಅಸಾದುಲ್ಲಾಖಾನ್‌(22), ಮಂಜುನಾಥ ಬಡಾವಣೆಯ ಮಹಮದ್‌ ಅನಾಸ್‌(18), ಟಿಪ್ಪುನಗರದ ನಿವಾಸಿಗಳಾದ ಸೈಯ್ಯದ್‌ ಇಬ್ರತ್‌ ಖಾನ್‌(19), ಸಾದತ್‌ ಇಮ್ತಿಯಾಜ್‌(23), ಗುಲಾಮ್‌ ನಾಜ್‌(34) ಬಂಧಿತ ಆರೋಪಿಗಳು.

ತುಂಗಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಟಿಪ್ಪುನಗರದಲ್ಲಿಗಾಂಜಾ ಮಾರಾಟ ಮಾಡುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ, ತುಂಗಾನಗರ ಪೊಲೀಸ್‌ ಠಾಣೆ ಪಿಐ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ತುಂಗಾನಗರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

Ad Widget

Related posts

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಬೇಕು:ಜಿಲ್ಲಾಧಿಕಾರಿ ಸೆಲ್ವಮಣಿ

Malenadu Mirror Desk

ದೆವ್ವದ ಹೆಸರಲ್ಲಿ ವೀಡಿಯೋ ವೈರಲ್ : ಶೇರ್ ಮಾಡೋರಿಗೆ ಶಿವಮೊಗ್ಗ ಪೊಲೀಸರ ವಾರ್ನಿಂಗ್

Malenadu Mirror Desk

ಹಣಗೆರೆಕಟ್ಟೆ ಲಾಜ್ ನಲ್ಲಿ ಮಹಿಳಾ ಪ್ರವಾಸಿ ಕೊಲೆ, ಮೃತದೇಹ ಪತ್ತೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.