Malenadu Mitra
ರಾಜ್ಯಶಿವಮೊಗ್ಗಸಾಗರ

ದೊಡ್ಡೇರಿ ಈರಪ್ಪರಿಗೆ ಗಣಪತಿಯಪ್ಪ ಪ್ರಶಸ್ತಿ ಕಾಗೋಡು ಚಳವಳಿ ನೆನಪು ಕಾರ್ಯಕ್ರಮ

ಸ್ವಾತಂತ್ರ್ಯಹೋರಾಟಗಾರ ಡಾ.ಹೆಚ್.ಗಣಪತಿಯಪ್ಪ ಸೇವಾಟ್ರಸ್ಟ್ ,ಸಾಗರ ತಾಲೂಕು ರೈತ ಸಂಘದ ಆಶ್ರಯದಲ್ಲಿ ಏಪ್ರಿಲ್ ೧೮ ರಂದು ಡಾ.ಹೆಚ್.ಗಣಪತಿಯಪ್ಪ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾಗೋಡು ಚಳವಳಿ ೭೦ ನೆನಪು ಮತ್ತು ಟ್ರಸ್ಟ್ನ ದಶಮಾನೋತ್ಸವ ನಿಮಿತ್ತ ನೀಡುತ್ತಿರುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮಂಡಗಳಲೆಯ ದೊಡ್ಡೇರಿ ಈರಪ್ಪ ಅವರಿಗೆ ಘೋಷಿಸಲಾಗಿದೆ. ಸಾಗರದ ಶೃಂಗೇರಿ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೈತ ನಾಯಕ ಕೆ.ಟಿ.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೋರಾಟದ ಈ ಹೊತ್ತಿನ ಆತಂಕಗಳು ವಿಷಯ ಕುರಿತು ಡಾ.ಮೋಹನ್ ಚಂದ್ರಗುತ್ತಿ ಮಾತನಾಡಲಿದ್ದಾರೆ.
ಟ್ರಸ್ಟ್ನ ಅಧ್ಯಕ್ಷರಾದ ಉಮೇಶ್ ಹಿರೇನೆಲ್ಲೂರು ಅಧ್ಯಕ್ಷತೆ ವಹಿಸುವರು. ವೇದಿಕೆಯಲ್ಲಿ ಶಾರದಾಮಠದ ಧರ್ಮದರ್ಶಿ ಅಶ್ವಿನ್‌ಕುಮಾರ್, ಪತ್ರಕರ್ತ ಜಿ.ನಾಗೇಶ್, ರಾಜೇಂದ್ರ ಆವಿನಹಳ್ಳಿ, ಜಿಲ್ಲಾ ಕನ್ನಡ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್, ಸಾಹಿತಿ ಪರಮೇಶ್ವರ ಕರೂರು, ರೈತಮುಖಂಡರಾದ ದಿನೇಶ್ ಶಿರವಾಳ,ಅಮೃತ್ ರಾಜ್ ತ್ಯಾಗರ್ತಿ ಮತ್ತಿತರರು ಭಾಗವಹಿಸುವರು.

Ad Widget

Related posts

ಅತೀ ಹಿಂದುಳಿದವರಿಗೆ ಅನ್ಯಾಯ, ದುಬಾರಿ ವಾಚ್ ಕಟ್ಟಿಕೊಂಡು ಸಮಾಜವಾದಿ ಎನ್ನಲಾಗದು. ಅರಸು ಚಿಂತನೆ ಇರಬೇಕು, ಹಿಂದುಳಿದ ವರ್ಗದ ಸಮಾನ ಮನಸ್ಕರ ಸಭೆಯಲ್ಲಿ ಹರಿಪ್ರಸಾದ್ ವಾಗ್ದಾಳಿ

Malenadu Mirror Desk

ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಕೈ ಬಿಡಬೇಕು: ಬಿಜೆಪಿ

Malenadu Mirror Desk

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಧರ್ಮದರ್ಶಿ ಡಾ.ರಾಮಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.