Malenadu Mitra
ರಾಜ್ಯಶಿವಮೊಗ್ಗ

ಚುನಾವಣೆ ಮುಂದೂಡಲು ಕಿಮ್ಮನೆ ಪತ್ರ

ರಾಜ್ಯದಲ್ಲಿ ಕೊರೊನಾ ಉಲ್ಬಣಿಸಿ ಮಾರಕವಾಗಿ ಹಬ್ಬುತಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ನೆಡೆಸುತಿರುವ ಚುನಾವಣೆಗಳನ್ನು ಮುಂದೂಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿದ ಕರ್ಫೂ,ವಾರಾಂತ್ಯ ಕರ್ಫ್ಯೂ ನಿರ್ಬಂಧಗಳ ನಡುವೆಯು ಕೊರೊನಾ ನಿಯಂತ್ರಣವಾಗುತ್ತಿಲ್ಲ.ಆದರೆ ಇಂತಹ ಸಮಯದಲ್ಲಿ ಚುನಾವಣೆಯ ಅವಶ್ಯಕತೆ ಇದೆಯೆ? ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊರೊನಾ ಭಾಧಿಸುವುದಿಲ್ಲವೇ    ಎಂದು ಪ್ರೆಶ್ನಿಸಿದ್ದಾರೆ.


ಈ ಕೊರೋನಾ ಆತಂಕದ ಪ್ರದೇಶಗಳು ಕರ್ನಾಟಕದಲ್ಲಿದೆಯೊ? ಚಂದ್ರಲೋಕದಲ್ಲಿದೆಯೊ?ಮನೆ ಮನೆಗೆ ಅಭ್ಯರ್ಥಿಗಳು,ಬೆಂಬಲಿಗರು ಮತ ಕೇಳಲು ಹೋದಾಗ  ಕೊರೊನಾ ಹರಡುವ ಅಪಾಯ ಹೆಚ್ಚಿದೆ.ಕೊರೊನಾ ಚುನಾವಣೆಗೆ ಹೆದುರುತ್ತದೋ ಎಂದು ಪ್ರೆಶ್ನಿಸಿದ್ದಾರೆ.
ರಾಜ್ಯದ ಈ ಕಠಿಣ ಸಮಯದಲ್ಲಿ ಸರ್ಕಾರಗಳ ಹಠಕ್ಕಿಂತ ಜನರ ಜೀವ,ಜೀವನ ಮುಖ್ಯ,ಕೂಡಲೇ ಈ ಗಂಭೀರ ವಿಷಯವನ್ನು ಮನಗೊಂಡು ಹಾಲಿ ನೆಡೆಸುತಿರುವ ಚುನಾವಣಾ ಪ್ರಕ್ರಿಯೆಗಳನ್ನು ಮುಂದೂಡಬೇಕೆಂದು ಚುನಾವಣಾ ಆಯುಕ್ತರಿಗೆ,ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Ad Widget

Related posts

ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ : ಆರಗ ಜ್ಞಾನೇಂದ್ರ

Malenadu Mirror Desk

ಹಂದಿ ಅಣ್ಣಿ ನಾಲ್ವರು ಸಹಚರರ ಬಂಧನ
ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳು ಅಂಧರ್

Malenadu Mirror Desk

ಹಳಿಗೆ ಸಿಲುಕಿದ ಎಮ್ಮೆಗಳು, ಇಂಟರ್ ಸಿಟಿ ಟ್ರೈನ್ ವಿಳಂಬ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.