Malenadu Mitra
ರಾಜ್ಯಶಿವಮೊಗ್ಗ

ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ : ಮನವಿ

ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಬೀದಿ ಬದಿ ವ್ಯಾಪಾರಿಗಳಾದ ನಾವು ಬಡವರಾಗಿದ್ದು, ಜೀವನ ನಿರ್ವಹಣೆಗಾಗಿ ತಿಂಡಿ ವ್ಯಾಪಾರ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದೇವೆ. ಈ ವ್ಯಾಪಾರ ಮಾಡಲು ನಿರ್ಭರ ಯೋಜನೆಯಿಂದ ಸಾಲ ಕೂಡ ಮಾಡಿದ್ದೇವೆ. ಈ ಉದ್ಯೋಗ ಬಿಟ್ಟು ತಮಗೆ ಯಾವ ಉದ್ಯೋಗವು ಇಲ್ಲ. ಸರ್ಕಾರ ಈಗ ಕೋವಿಡ್ ೨ನೇ ಸಂದರ್ಭದಲ್ಲಿ ಮಾರ್ಗಸೂಚಿ ಹೊರಡಿಸಿ ತಿಂಡಿ ಗಾಡಿಗಳಿಗೆ ಅವಕಾಶ ನೀಡಿಲ್ಲ. ಇದರಿಂದ ನಮಗೆ ತುಂಬಾ ತೊಂದರೆಯಾಗಿದೆ ಎಂದು ತಿಳಿಸಿದರು.

ದೊಡ್ಡ ದೊಡ್ಡ ಐಶರಾಮಿ ಹೋಟೆಲ್‌ಗಳಲ್ಲಿ ಪಾರ್ಸಲ್ ತೆಗೆದುಕೊಂಡು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಇದೇ ರೀತಿ ತಿಂಡಿ ಗಾಡಿಗಳಿಂದಲೂ ಕೂಡ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಬೇಕು. ನಾವು ಕೂಡ ಪಾರ್ಸಲ್ ನೀಡುತ್ತೇವೆ. ಇದರಿಂದ ಬಡ ಕೂಲಿ ಕಾರ್ಮಿಕರಿಗೂ ಅನುಕೂಲವಾಗುತ್ತದೆ. ಐಶರಾಮಿ ಹೋಟೆಲ್‌ಗಳಲ್ಲಿ ದುಬಾರಿ ಬೆಲೆ ತಿಂಡಿ ಖರೀದಿಸಲು ಕೆಲವರು ಅಸಮರ್ಥರಾಗಿದ್ದಾರೆ. ಹಾಗಾಗಿ ನಮಗೂ ಕೂಡ ಪಾರ್ಸಲ್ ವ್ಯವಸ್ಥೆ ಮಾಡಿಕೊಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಚನ್ನವೀರಪ್ಪ ಗಾಮನಗಟ್ಟಿ, ಮಹೇಶ್, ಅಯ್ಯಪ್ಪ, ನವೀನ್ ಸೇರಿದಂತೆ ಹಲವರಿದ್ದರು.

Ad Widget

Related posts

ಶಿವಮೊಗ್ಗ ಗಲಭೆ ಸರ್ಕಾರ ಪ್ರಾಯೋಜಿತ ಕೃತ್ಯ: ಮುಸ್ಲಿಂ ಜಂಟಿ ಕ್ರಿಯಾ ಸಮಿತಿಯ ನೇರ ಆರೋಪ, ನ್ಯಾಯಾಲಯಕ್ಕೆ ಹೋಗ್ತೇವೆ ಎಂದ ಮುಖಂಡರು ಯಾಕೆ ಗೊತ್ತಾ ?

Malenadu Mirror Desk

ಸಿ.ಎಂ.ತವರಿನ ನಾಲ್ವರಲ್ಲಿ ಬ್ರಿಟನ್ ವೈರಸ್

Malenadu Mirror Desk

ಸವಾಲುಗಳನ್ನು ಎದುರಿಸಿ, ಎತ್ತರಕ್ಕೇರಿದ ಮಂಜುನಾಥಗೌಡರು:ಆರ್.ಎಂ.ಎಂ.ಗೆ ಸನ್ಮಾನ ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.