Malenadu Mitra
ರಾಜ್ಯಶಿವಮೊಗ್ಗಹೊಸನಗರ

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.
ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9) ಮೃತ ನಿರ್ಭಾಗ್ಯ ಬಾಲಕರು. ಮನೆಯಲ್ಲಿ ಬುಧವಾರ ಮಧ್ಯಾಹ್ನ ಹೆತ್ತವರೊಂದಿಗೆ ಊಟ ಮಾಡಿದ ಮಕ್ಕಳು ತಮ್ಮ ಮನೆಯ ಜಾನುವಾರು ಹುಡುಕಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಗದ್ದೆಬಯಲಲ್ಲಿ ಯಾರೂ ಇಲ್ಲದ ಕಾರಣ ಗೊತ್ತಾಗಲಿಲ್ಲ. ಮೊದಲು ಬಿದ್ದವನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನೂ ಬಿದ್ದಿರುವ ಶಂಕೆಯಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಅತಿಥಿ ಉಪನ್ಯಾಸಕರ ಕಾಯಂಗೊಳಿಸಬೇಕು: ಆಯನೂರು ಮಂಜುನಾಥ್

Malenadu Mirror Desk

ಸಾಂಸ್ಕೃತಿಕ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ, ಚಕ್ರತೀರ್ಥರನ್ನು ವಜಾ ಮಾಡಿ,ಕಾನೂನು ಕ್ರಮ ಕೈಗೊಳ್ಳಬೇಕು: ಪ್ರಗತಿಪರರ ಆಗ್ರಹ

Malenadu Mirror Desk

ಶಿವಮೊಗ್ಗದಲ್ಲಿ 244 ಮಂದಿಗೆ ಸೋಂಕು, ಒಂದು ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.