Malenadu Mitra
ರಾಜ್ಯಶಿವಮೊಗ್ಗಹೊಸನಗರ

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.
ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9) ಮೃತ ನಿರ್ಭಾಗ್ಯ ಬಾಲಕರು. ಮನೆಯಲ್ಲಿ ಬುಧವಾರ ಮಧ್ಯಾಹ್ನ ಹೆತ್ತವರೊಂದಿಗೆ ಊಟ ಮಾಡಿದ ಮಕ್ಕಳು ತಮ್ಮ ಮನೆಯ ಜಾನುವಾರು ಹುಡುಕಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.
ಗದ್ದೆಬಯಲಲ್ಲಿ ಯಾರೂ ಇಲ್ಲದ ಕಾರಣ ಗೊತ್ತಾಗಲಿಲ್ಲ. ಮೊದಲು ಬಿದ್ದವನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನೂ ಬಿದ್ದಿರುವ ಶಂಕೆಯಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಅಗತ್ಯವಿಲ್ಲ: ಕೆ.ಬಿ ಪ್ರಸನ್ನಕುಮಾರ್

Malenadu Mirror Desk

ಕೈಗಾರಿಕೆ ಅಭಿವೃದ್ಧಿಗೆ ಸಹಕಾರ: ದತ್ತಾತ್ರಿ

Malenadu Mirror Desk

ಸಿಗಂದೂರು ಕ್ಷೇತ್ರದಿಂದ ಜನಮುಖಿ ಕೆಲಸ, ನವರಾತ್ರಿ ಕಾರ್ಯಕ್ರಮದಲ್ಲಿ ಅರುಣಾನಂದ ಸ್ವಾಮೀಜಿ ಪ್ರಶಂಸೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.