Malenadu Mitra
ರಾಜ್ಯಶಿವಮೊಗ್ಗ

ಕೊರೊನ ಮತ್ತಷ್ಟು ಗಂಭೀರ: 17 ಸಾವು, ಎಲ್ಲಿ ಎಷ್ಟು ಸೋಂಕಿತರು ?

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಭಾನುವಾರ ಒಂದೇ ದಿನ 17 ಸೋಂಕಿತರು ಸಾವಿಗೀಡಾಗಿದ್ದರೆ, ಸೋಂಕಿತರ ಸಂಖ್ಯೆ 857 ಕ್ಕೇರಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯಲ್ಲಿ 857 ಮಂದಿಗೆ ಸೋಂಕು ತಗುಲಿದ್ದು, 748 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 495ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 265 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 34,ಶಿಕಾರಿಪುರ 43,ತೀರ್ಥಹಳ್ಳಿಯಲ್ಲಿ 129 ,ಸೊರಬ 62,ಸಾಗರ 192,ಹೊಸನಗರ 111 ಹಾಗೂ ಇತರೆ ಜಿಲ್ಲೆಗಳ 21 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 44 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4597 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನ ಸೋಂಕು

ಮಲೆನಾಡಿನ ತಾಲೂಕುಗಳ ಬಹುತೇಕ ಪ್ರಕರಣಗಳು ಬೆಂಗಳೂರಿನಿಂದ ಬಂದವರಲ್ಲಿ ಕಾಣಿಸಿಕೊಂಡಿವೆ. ಕೆಲಸ ಅರಸಿ ರಾಜಧಾನಿಗೆ ಹೋಗಿದ್ದ ಜನರು ಜನತಾ ಕಫ್ರ್ಯೂ ಘೋಷಣೆ ಮಾಡುತ್ತಲೇ ಊರುಗಳತ್ತ ಧಾವಿಸಿದ್ದರು. ಊರಿಗೆ ಬಂದವರು ಮದುವೆ , ಬೀಗರೂಟ ಅಂತ ಓಡಾಡಿಕೊಂಡು ಸೋಂಕು ಹೆಚ್ಚಲು ಕಾರಣರಾಗಿದ್ದಾರೆ ಎನ್ನಲಾಗಿದೆ. ಜನರು ಲಾಕ್‍ಡೌನ್ ಅನ್ನು ಗಂಭೀರವಾಗಿ ಪರಿಗಣಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಸೋಂಕು ಹಾಗೂ ಸಾವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

Ad Widget

Related posts

ಭಾಷೆ ವಿಚಾರದಲ್ಲಿ ಸಂಘರ್ಷ ಸಲ್ಲಿದು: ಸಚಿವ

Malenadu Mirror Desk

ಖಾಸಗಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಳಕ್ಕೆ ನಿರ್ಧಾರ

Malenadu Mirror Desk

ವಿಡಿಯೊ ಕಾಲ್ ನಲ್ಲಿಯೇ ಲೈವ್ ಸುಸೈಡ್.ಕಾರಣ ಏನು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.