Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಗುಣಮುಖರ ಸಂಖ್ಯೆ, 15 ಸಾವು, ಸಾಗರದಲ್ಲಿ ಯಥಾಸ್ಥಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಸೋಮವಾರ ಒಂದೇ ದಿನ 1028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15 ಸೋಂಕಿತರು ನಿಧನರಾಗಿದ್ದಾರೆ. 676 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 601 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 162 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ58, ಶಿಕಾರಿಪುರ 103, ತೀರ್ಥಹಳ್ಳಿಯಲ್ಲಿ101 ,ಸೊರಬ 88, ಸಾಗರ 141, ಹೊಸನಗರ 9 ಹಾಗೂ ಇತರೆ ಜಿಲ್ಲೆಗಳ 14 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 35 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 6828ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಪ್ರೊ.ಬಿ.ಕೃಷ್ಣಪ್ಪ ಆದರ್ಶವಾದಿಯಾಗಿದ್ದರು: ದಸಂಸ ಸುವರ್ಣ ಸಂಭ್ರಮದಲ್ಲಿ ಆಯನೂರು ಮಂಜುನಾಥ್‌ ಹೇಳಿಕೆ

Malenadu Mirror Desk

ಅವೈಜ್ಞಾನಿಕ ನೀರಿನ ಬಿಲ್ ಕಟ್ಟಬೇಡಿ: ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ

Malenadu Mirror Desk

ಶಿವಮೊಗ್ಗದಲ್ಲಿ ಇಳಿದ ಕೊರೊನ,ಸೊರಬದಲ್ಲಿ ಜೀರೊ ಕೇಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.