Malenadu Mitra
ರಾಜ್ಯಶಿವಮೊಗ್ಗ

ಸಫಾಯಿ ಕರ್ಮಾಚಾರಿಗಳ ಸುರಕ್ಷತೆ ಪರಿಶೀಲನೆ

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ (ಕೋಟೆ) ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಕೋವಿಡ್-19 ರ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಛತಾಗಾರರು/ಪೌರ ಕಾರ್ಮಿಕರುಗಳಿಗೆ ನೀಡಿರುವ ಸೌಲಭ್ಯಗಳು ಹಾಗೂ ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಯಲ್ಲಿ “ವೀಡಿಯೋ ಸಂವಾದ” ನಡೆಸಿ ಅಗತ್ಯ ಮಾಹಿತಿ ಪಡೆದರು. ಸಭೆಯಲ್ಲಿ ಜಿ.ಪಂ ಸಿ.ಇ.ಓ ವೈಶಾಲಿ ಎಂ ಎಲ್, ಆಯೋಗದ ಕಾರ್ಯದರ್ಶಿ ಶ್ರೀಮತಿ ರಮಾ, ಉಪ ಕಾರ್ಯದರ್ಶಿ ಕೆ ಜಯಲಕ್ಷಮ್ಮ, ಉಪ ಕಾರ್ಯದರ್ಶಿ ಡಾ: ಎಸ್ ರಂಗಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ad Widget

Related posts

ಪರೀಕ್ಷೆ ಬಿಟ್ಟು ಪೊಲೀಸರಿಗೆ ದೂರು ಕೊಟ್ಟ ನರ್ಸಿಂಗ್ ವಿದ್ಯಾರ್ಥಿಗಳು

Malenadu Mirror Desk

ಭದ್ರಾ ಜಲಾಶಯದ ಗರ್ಭದಲ್ಲಿಯೇ ಕಳಪೆ ಕಾಮಗಾರಿ ರೈತ ಮುಖಂಡ ಕೆ.ಟಿ. ಗಂಗಾಧರ್ ತನಿಖೆಗೆ ಆಗ್ರಹ

Malenadu Mirror Desk

ಜೆ.ಪಿ.ನಾರಾಯಣ ಸ್ವಾಮಿ ಕೊಡುಗೆ ಅನನ್ಯ: ಜಿ.ಡಿ.ನಾಯ್ಕ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.