Malenadu Mitra
ರಾಜ್ಯಶಿವಮೊಗ್ಗಸಾಗರ

ರಕ್ತದಾನ ಮಾಡುವ ಮೂಲಕ ರಕ್ತದಾನಿಗಳ ದಿನಾಚರಣೆ ಮಾಡಿದ ಡಾ.ರಾಜನಂದಿನಿ ಕಾಗೋಡು

ವಿಶ್ವ ರಕ್ಷದಾನಿಗಳ ದಿನದ ಅಂಗವಾಗಿ ಸೋಮವಾರ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆ ಹಾಗೂ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಸ್ವತಃ ರಕ್ತದಾನ ಮಾಡಿ ಮಾತನಾಡಿದ ವೈದ್ಯರೂ, ಕೆಪಿಸಿಸಿ ಕಾರ್ಯದರ್ಶಿಯಾದ ಡಾ.ರಾಜನಂದಿನಿ ಕಾಗೋಡು ಅವರು, ರಕ್ತದಾನ ಸರ್ವಶ್ರೇಷ್ಠವಾದುದು. ಇನ್ನೊಬ್ಬರ ಜೀವ ಉಳಿಸುವ ಅವಕಾಶ ರಕ್ತದಾನದಿಂದ ಸಿಗುತ್ತದೆ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಮತ್ತ ಜೀವದ ಮೌಲ್ಯ ಎಲ್ಲರಿಗೂ ಅರಿವಾಗಿದೆ. ಇಂತಹ ಹೊತ್ತಲ್ಲಿ ರಕ್ತದಾನ ಅತ್ಯಂತ ಅವಶ್ಯವಾಗಿದೆ. ರೋಟರಿ ಹಾಗೂ ರೆಡ್‌ಕ್ರಾಸ್ ಸಂಸ್ಥೆಗಳು ಈ ನಿಟ್ಟಿನಲ್ಲಿ ಯಾವತ್ತೂ ಜನಪರ ಕೆಲಸ ಮಾಡುತ್ತಿವೆ. ನಮ್ಮ ಯುವಜನರು ಯಾವುದೇ ಆತಂಕಪಡದೆ ರಕ್ತದಾನ ಮಾಡಬೇಕು. ಆರೋಗ್ಯವಂತೆ ವ್ಯಕ್ತಿಗಳು ರಕ್ತದಾನಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು. ಈ ಸಂದರ್ಭ ರೋಟರಿ ಮತ್ತು ರೆಡ್ ಕ್ರಾಸ್ ರಕ್ತನಿಧಿಯ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Ad Widget

Related posts

ತಡರಾತ್ರಿ ಅಥವಾ ನಾಳೆ ಶಿವಮೊಗ್ಗ ಕ್ಷೇತ್ರ ಅಭ್ಯರ್ಥಿ ಘೋಷಣೆ : ಯಡಿಯೂರಪ್ಪ ಹೇಳಿಕೆ

Malenadu Mirror Desk

ಅಕ್ರಮ ಮರಳುಗಾರಿಕೆ ಯಾರೇ ಮಾಡಿದರೂ ಕ್ರಮ, ಬರೀ ಹೆಸರಿಗೆ ಸಚಿವನಾಗಿರಲಾರೆ : ಆರಗ ಜ್ಞಾನೇಂದ್ರ

Malenadu Mirror Desk

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.