Malenadu Mitra
ರಾಜ್ಯಶಿವಮೊಗ್ಗ

ಗಾಜನೂರು ಡ್ಯಾಮಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಮಲೆನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಗಾಜನೂರು ಡ್ಯಾಂ ನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶುಕ್ರವಾರ ಗಾಜನೂರು ಡ್ಯಾಮಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಡ್ಯಾಮಿನಿಂದ ೩೨೦೦೦ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದು ಹೆಚ್ಚಾದರ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಸೀಗೇಹಟ್ಟಿ, ಇಮಾಮ್ ಬಾಡ ಪ್ರದೇಶಗಳಿಗೆ ನೀರು ಪ್ರತಿವರ್ಷ ನುಗ್ಗುತಿದ್ದು, ಈ ಬಾರಿ ಮುಂಜಾಗೃತಾ ಕ್ರಮಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಲಾಶಯದ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರಿನ ಮಟ್ಟ ಒಳಹರಿವು ಇತ್ಯಾದಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ತಹಸೀಲ್ದಾರ್ ನಾಗರಾಜ್, ನೀರಾವರಿ ನಿಗಮದ ಅಧಿಕಾರಿಗಳು ಹಾಜರಿದ್ದರು.

Ad Widget

Related posts

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೊಪ, ಮೈಸೂರು ನಜರಾಬಾದ್ ಠಾಣೆಯಲ್ಲಿ ದೂರು

Malenadu Mirror Desk

ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಕಾರ್ಯಕ್ರಮ, ಕುದರೂರು ಗ್ರಾಮ ಪಂಚಾಯಿತಿಯಲ್ಲಿ ನಿವೃತ್ತ ಯೋಧ ಮತ್ತು ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ

Malenadu Mirror Desk

ನಮಗೇ ಹೆಚ್ಚು ಜಯ, ಚೀಟಿ ಮೂಲಕ ಮೀಸಲು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.