Malenadu Mitra
ರಾಜ್ಯಶಿವಮೊಗ್ಗಸೊರಬ

ಜನವಿರೋಧಿ ಸರಕಾರಗಳು: ಬಾಸೂರು ಚಂದ್ರೇಗೌಡ ಆರೋಪ

ಜನಸಾಮಾನ್ಯರ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹಿರಿಯ ರಾಜಕಾರಣಿ ಹಾಗೂ ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಆರೋಪಿಸಿದರು.
ಸೊರಬ ಪಟ್ಟಣದ ರಂಗನಾಥ ಪೆಟ್ರೋಲ್ ಬಂಕ್ ಎದುರು ಜೆಡಿಎಸ್ ವತಿಯಿಂದ ಶುಕ್ರವಾರ ಕೇಂದ್ರ ಸರಕಾರದ ಅನಿಯಮಿತ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿನನಿತ್ಯ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಹೆಚ್ಚಿಸುತ್ತಿದ್ದು ಇದರಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದೆ. ಕೊರೊನಾದ ಹೆಸರಲ್ಲಿ ಸರ್ಕಾರಗಳು ಬೊಕ್ಕಸವನ್ನು ಲೂಟಿ ಮಾಡುತ್ತಿದ್ದು ತುಘಲಕ್ ದರ್ಬಾರನ್ನು ಮಾಡುತ್ತಿವೆ. ಭಾರತ ಕೃಷಿ ಅವಲಂಬಿತ ರಾಷ್ಟ್ರವಾಗಿದ್ದು ಕೂಡ ರೈತರು ದೇಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿರುವುದು ಖಂಡನೀಯ. ದೇಶಕ್ಕೆ ಅನ್ನ ನೀಡುವ ರೈತನ ಮೇಲೆ ಕೇಂದ್ರ ಸರ್ಕಾರ ತೆರಿಗೆಯ ಬರೆ ಹಾಕಿದ್ದು ಸರಿಯಲ್ಲ.
ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಕೆ.ಅಜ್ಜಪ್ಪ ಮಾತನಾಡಿ ರಸಗೊಬ್ಬರಗಳ ಬೆಲೆಯನ್ನು ಸರ್ಕಾರ ಹೆಚ್ಚಿಸಿದ್ದು ಖಂಡನೀಯವಾಗಿದೆ. ಅಧಿಕಾರಕ್ಕೆ ಬರುವಾಗ ಸರ್ಕಾರಗಳು ನೀಡಿದ ಭರವಸೆಗಳು ಹುಸಿಯಾಗಿದ್ದು ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಬಸವನಗೌಡ ಪಾಟೀಲ್ ಮಲ್ಲಾಪುರ, ಸುನೀಲ್ ಹಂಚಿನ ಮನೆ, ಪುಂಡಲೀಕಪ್ಪ, ಈಶ್ವರಪ್ಪ, ಮಹಾಂತೇಶ, ಹುಚ್ಚಪ್ಪ ಚಿಮಣೂರ್, ತಿಮ್ಮಣ್ಣ, ಮಂಜಪ್ಪ, ದಾನಪ್ಪ ನಾಯಕ, ಸಂದೀಪ ಇತರರಿದ್ದರು.

Ad Widget

Related posts

ಧರಣಿ, ಪ್ರತಿಭಟನೆಯಿಂದ ಮೀಸಲಾತಿ ಸಿಗದು, ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ ಹೇಳಿಕೆ

Malenadu Mirror Desk

ಕಳಸವಳ್ಳಿಯಲ್ಲಿ ಅಕ್ರಮ ನಾಟಾ ಕಡಿತಲೆ, ಸಂಚಾರಿ ಅರಣ್ಯದಳದ ದಾಳಿ, ದೇವಾಲಯ ಕಾರ್ಯದರ್ಶಿ ವಿರುದ್ಧ ದೂರು
ಪ್ರಕರಣ ಮುಚ್ಚಿಹಾಕಲು ರಾಜಕೀಯ ನಾಯಕರಿಂದ ಒತ್ತಡ: ಆರೋಪ

Malenadu Mirror Desk

ಊಟ ಬಡಿಸದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿದ ಗಂಡ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.