Malenadu Mitra
ರಾಜ್ಯಶಿವಮೊಗ್ಗ

ತುಂಬಿದ ತುಂಗೆಗೆ ಸಚಿವರಿಂದ ಬಾಗೀನ

ಉತ್ತಮ ಮುಂಗಾರು ಮಳೆಯಿಂದಾಗಿ ತುಂಬಿದ ತುಂಗಾ ಮೇಲ್ದಂಡೆ ಜಲಾಶಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ತುಂಗಾನದಿಗೆ ಬಾಗಿನ ಸಮರ್ಪಿಸಿದರು.
ಪತ್ನಿ ಜಯಲಕ್ಷ್ಮಿ ಅವರೊಂದಿಗೆ ಮುಂಜಾಣೆಯೇ ಗಾಜನೂರಿಗೆ ಬಂದು ಪೂರೋಹಿತರು ಆಯೋಜಿಸಿದ್ದ ಗಂಗಾಪೂಜೆಯಲ್ಲಿ ಪಾಲ್ಗೊಂಡಿದ್ದರು. ನಂತರ ಪತ್ನಿ ಸಮೇತರಾಗಿ ನದಿಗೆ ಬಾಗಿನ ಅರ್ಪಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತುಂಗಾ ಜಲಾಶಯ ತುಂಬಿರುವುದರಿAದ ಭೂಮಿ ಹಸನು ಮಾಡಲು, ನಾಟಿ, ಗೊಬ್ಬರ ಹಾಕಲು ಅನುಕೂಲವಾಗಿದೆ. ದೇವರ ದಯೆಯಿಂದ ಒಳ್ಳೆ ಮಳೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಗನ್ನಿಶಂಕರ್, ಪಾಲಿಕೆ ಸದಸ್ಯರಾಗ ಚನ್ನಬಸಪ್ಪ, ಜ್ಞಾನೇಶ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಿದ್ದರು.

Ad Widget

Related posts

ಈಡಿಗರ ಸೊಸೈಟಿ ಕೇಶವಮೂರ್ತಿ ನಿಧನ

Malenadu Mirror Desk

ಡಿಸೆಂಬರ್ ಹೊತ್ತಿಗೆ ವಿಮಾನ ಹಾರಾಟ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ: ಸಂಸದರಿಂದ ಮಾಹಿತಿ

Malenadu Mirror Desk

ಗಲ್ಲಿ ಹುಡುಗರ ವೈಷಮ್ಯ ಗಲಭೆ ರೂಪ ಪಡೆಯಿತೆ ?, ರಾಗಿಗುಡ್ಡ ಕಲ್ಲುತೂರಾಟ, ಪ್ರಕ್ಷುಬ್ಧತೆ ಹಿಂದಿನ ಅಸಲಿಯತ್ತೇನು ಗೊತ್ತೇ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.