Malenadu Mitra
ರಾಜ್ಯಶಿವಮೊಗ್ಗ

ಸಾಗುವಾನಿ ಸೈಜುಗಳ ಅಕ್ರಮ ಸಾಗಾಟ: ಪ್ರಕರಣ ದಾಖಲು

ಶಿವಮೊಗ್ಗನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವಾನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ಸುಬೇರ್ ಉಲ್ಲಾ ಹಾಗೂ ಜಿಯಾಉಲ್ಲಾ ಮತ್ತು ಇತರರ ಪೈಕಿ ಆರೋಪಿ ಜಿಯಾಉಲ್ಲಾ ಮತ್ತು ಇತರರು ತಪ್ಪಿಸಿಕೊಂಡಿರುತ್ತಾರೆ. ಆದರೆ ಮೊದಲ ಇಬ್ಬರು ಆರೋಪಿಗಳನ್ನು ಬಂಧಿಸಿ ಮೊಕದ್ದಮೆ ದಾಖಲಿಸಿ ಆರೋಪಿಗಳಿಂದ ಸಾಗುವನಿ ಸೈಜು ಮತ್ತು ಮಾರುತಿ ಓಮಿನಿಯನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಕಾರ್ಯಾಚರಣೆ ವೇಳೆ ವಲಯ ಅರಣ್ಯಾಧಿಕಾರಿಗಳಾದ ಗಿರೀಶ್ ಸಂಕ್ರಿ, ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಮಜೀದ್, ಉಮೇಶ್ ನಾಯ್ಕ್, ಅರಣ್ಯ ರಕ್ಷಕರಾದ ಅವಿನಾಶ್.ಜಿ, ಆನಂದ.ಜೆ, ನೀಲಮ್ಮ ದಾದ್ಮಿ, ಚೆಲುವಮಣಿ, ಮಂಜುನಾಥ.ಬಿ.ಬಿ ಇದ್ದರು.

Ad Widget

Related posts

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೧ ,೨ ಕ್ಕೆ
ಹಿರಿಯ ಸಾಹಿತಿ ಲಕ್ಷ್ಮಣ್‌ಕೊಡಸೆ ಸರ್ವಾಧ್ಯಕ್ಷರು, ಹಲವು ಗೋಷ್ಠಿಗಳು

Malenadu Mirror Desk

ಕೊರೊನ: 19 ಸಾವು, 884 ಮಂದಿ ಡಿಸ್ಚಾರ್ಜ್

Malenadu Mirror Desk

ಬಿಜೆಪಿ ಸಭೆಯೂ..ರಂಗಾದ ನಗರವೂ..

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.