Malenadu Mitra
ರಾಜ್ಯಶಿವಮೊಗ್ಗ

ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿಜೆಡಿಎಸ್ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆಗಳನ್ನು ಏರಿಸಿರುವುದನ್ನು ಖಂಡಿಸಿ ಮಾಜಿ ಶಾಸಕಿ ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಘಟಕದ ಜೆಡಿಎಸ್ ಕಾರ್ಯಕತರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ನಿಂದ ಸಂಕಷ್ಟದಿಂದ ಜನರು ಬಳಲುತ್ತಿರುವ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರ ಜನಸಾಮಾನ್ಯರ, ರೈತರ ಮತ್ತು ಕೂಲಿ ಕಾರ್ಮಿಕರ ಹಾಗೂ ದೀನ ದಲಿತರ ಬದುಕಿನ ಮೇಲೆ ಬರೆ ಏಳೆಯುವಂತೆ ಬೆಲೆಗಳನ್ನು ಗಗನಕ್ಕೇರಿಸಿದ್ದು, ಈ ಬೆಲೆ ಏರಿಕೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳಲ್ಲಿನ ಕುಟುಂಬದ ಮುಖ್ಯಸ್ಥರು, ದುಡಿಯುವ ವ್ಯಕ್ತಿಗಳು ಸಾವನಪ್ಪಿ ಕುಟುಂಬಗಳು ನಿರ್ಗತಿಕರಾಗಿ ಬೀದಿ ಪಾಲಾಗಿದ್ದಾರೆ. ಅಲ್ಲದೇ ಎಷ್ಟೋ ಕುಟುಂಬಗಳಲ್ಲಿ ತಂದೆ-ತಾಯಿಗಳು ಮರಣ ಹೊಂದಿ ಎಳೆ ಮಕ್ಕಳು ಅನಾಥ ರಾಗಿದ್ದಾರೆ. ಲಾಕ್‌ಡೌನ್‌ನಿಂದಾಗಿ ರೈತರ ಸಮುದಾಯ ತಾನು ಬೆಳೆದ ಆಹಾರ ಸಾಮಾಗ್ರಿ, ತರಕಾರಿ ಮತ್ತು ಹಣ್ಣು ಹಂಪಲು ಕಟಾವು ಮಾಡಿ ಅದನ್ನು ಸಾಗಿಸಲು ಮತ್ತು ಮಾರಾಟ ಮಾಡಲು ವರ್ತಕರು ಮುಂದೆ ಬರದೇ ಇರುವುದರಿಂದ ಪಸಲನ್ನು ಕೊಳೆಯಲು ಬಿಟ್ಟು ನಿರ್ಗತಿಕರಾಗಿದ್ದಾರೆ. ಇತಂಹ ಸಮಯ ದಲ್ಲಿ ಬೆಲೆ ಏರಿಕೆಯನ್ನು ಗಗನಕ್ಕೇರಿಸಿ ಆ ವರ್ಗದವರ ಜನ ಜೀವನ ಅಸ್ತವ್ಯಸ್ಥ ಮಾಡಿದೆ ಎಂದು ಆಕ್ರೋಶ ವ್ಯಕ್ತಪ ಡಿಸಿದರು.

ತೈಲ ಬೆಲೆ ಏರಿಕೆಯಿಂದ ರಾಜ್ಯದ ಜನತೆ ನರಳುತ್ತಿರುವ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದೆ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ವಿಮರ್ಶಿಸಿ ದರ ಏರಿಕೆಯನ್ನು ಹಿಂಪಡೆ ಯಬೇಕು. ಕರೋನಾ ಸೋಂಕಿನಿಂದ ೧ ಮತ್ತು2ನೇ ಅಲೆಯಲ್ಲಿ ಮೃತರಾದ ಹಾಗೂ ಬಡತನ ರೇಖೆ ಕೆಳಗೆ ಬರುವ ಮೃತ ವ್ಯಕ್ತಿಗಳು ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವು ದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಮೃತ ವ್ಯಕ್ತಿಗಳ ಕುಟುಂಬಗಳಿಗೆ ಯಾವುದೇ ಷರತ್ತು ಮತ್ತು ತಾರತಮ್ಯವಿಲ್ಲದೇ ಪ್ರತಿ ಕುಟುಂಬಕ್ಕೆ5 ಲಕ್ಷ ರೂ. ಪರಿಹಾರ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಗ್ರಾಮಾಂತರ ಜೆಡಿಎಸ್ ಕಾಯಾಧ್ಯಕ್ಷ ಕಾಂತರಾಜ್, ಎಪಿಎಂಸಿ ಸದಸ್ಯ ಎಸ್.ಎನ್.ಮಹೇಶ್, ದಾದಾಪೀರ್, ಕುಮಾರನಾಯ್ಕ್, ಗೀತಾಸತೀಶ್, ನಾರಾಯಣಪುರ ಕುಮಾರ ನಾಯ್ಕ್, ಸತೀಶ್‌ಗೌಡ, ಸುರೇಶ್, ಪ್ರಭಾಕರ್ ಬಾರಂಗಿ ಇನ್ನಿತರರು ಭಾಗವಹಿಸಿದ್ದರು.

Ad Widget

Related posts

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk

ಶಿಸ್ತು, ಪರಿಶ್ರಮದಿಂದ ಸಾಧನೆ: ಡಿವೈಎಸ್ಪಿ ಕೆ.ಎಲ್.ಗಣೇಶ್

Malenadu Mirror Desk

ಆಧುನಿಕ ಭಾರತ ನಿರ್ಮಾಣದಲ್ಲಿ ರಾಜೀವ್ ಗಾಂಧಿ ಅವರ ಕೊಡುಗೆ ಮಹತ್ತರವಾಗಿದೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.