Malenadu Mitra
ರಾಜ್ಯಸಾಗರ

ಸಂಕಷ್ಟದ ಸಂದರ್ಭ ನೊಂದ ಜನರ ಪರ :ಬೇಳೂರು

ಸಾಗರ : ಸಂಕಷ್ಟದ ಸಂದರ್ಭದಲ್ಲಿ ನೊಂದ ಜನರ ಪರವಾಗಿ ನಿಲ್ಲುವುದು ಮಾನವೀಯ ಲಕ್ಷಣ. ಅಂತಹ ಕೆಲಸವನ್ನು ಕೊರೋನಾ ಸೇರಿದಂತೆ ಹಿಂದೆನೆಲ್ಲಾ ಸಂಕಷ್ಟ ಸಂದರ್ಭದಲ್ಲಿ ನಾನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಗಣಪತಿ ದೇವಸ್ಥಾನ ಆವರಣದಲ್ಲಿ ಗುರುವಾರ ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ ಅರ್ಚಕರಿಗೆ ಮತ್ತು ಪುರೋಹಿತರಿಗೆ ದಿನಸಿ ಕಿಟ್ ವಿತರಣೆ ಹಿರಿಯ ಪುರೋಹಿತ ಎಸ್. ಗಜಾನನ ಜೋಯ್ಸ್ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.
ಕೊರೋನಾ ಹಿನ್ನೆಲೆಯಲ್ಲಿ ದೇವಸ್ಥಾನದ ಬಾಗಿಲುಗಳನ್ನು ತೆರೆಯದೆ ಇರುವುದರಿಂದ ಅರ್ಚಕರು ತೀವೃ ಸಂಕಷ್ಟದಲ್ಲಿದ್ದಾರೆ. ಅರ್ಚಕ ಕುಟುಂಬಗಳು ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಕಾಣಿಕೆಯನ್ನೇ ನಂಬಿಕೊಂಡಿರುತ್ತಾರೆ. ಅವರಿಗೆ ಇತರೆ ಮೂಲದಿಂದ ಆದಾಯವೂ ಇರುವುದಿಲ್ಲ. ಅರ್ಚಕರಿಗೆ ಕೈಲಾದ ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿದೆ. ಸರ್ಕಾರ ಅರ್ಚಕರಿಗೆ ಹೆಚ್ಚಿನ ನೆರವು ಕಲ್ಪಿಸುವ ಜೊತೆಗೆ ದೇವಸ್ಥಾನ ಬಾಗಿಲು ತೆರೆಯುವ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಧಾ ಗೋಪಾಲಕೃಷ್ಣ, ಕಾಂಗ್ರೇಸ್ ನಗರ ಅಧ್ಯಕ್ಷ ಸುರೇಶ್ ಬಾಬು, ಪ್ರಮುಖರಾದ ವಿ.ಶಂಕರ್, ಗಣಪತಿ ಮಂಡಗಳಲೆ, ಅಮಿತ್, ರಮೇಶ್ ಚಂದ್ರಗುತ್ತಿ, ಸಂತೋಷ್, ವಿಜಯ್, ರವಿ ಲಿಂಗನಮಕ್ಕಿ ಇನ್ನಿತರರು ಹಾಜರಿದ್ದರು.

Ad Widget

Related posts

ರಾತ್ರಿತನಕ ಚೆನ್ನಿ ಹೆಸರಿದೆ,ಬೆಳಗ್ಗೆ ಬದಲಾದರೆ ನಮಗೆ ಗೊತ್ತಿಲ್ಲ!
ಕುತೂಹಲ ಉಳಿಸಿಕೊಂಡಿರುವ ಬಿಜೆಪಿ ಶಿವಮೊಗ್ಗ ಅಭ್ಯರ್ಥಿ

Malenadu Mirror Desk

ಕಾಮ್ರೇಡ್ ವಿಜಯ್ ಆಲಿಯಾಸ್ ಬಿಜಿಕೆ ಬಂಧನ ಕರ್ನಾಟಕದಲ್ಲಿ ನಕ್ಸಲ್ ಸಂಘಟನೆಗೆ ಭಾರೀ ಹಿನ್ನಡೆ

Malenadu Mirror Desk

ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಕಟ್ಟು ಬೀಳಬಾರದು, ಮಲೆನಾಡು ಮಿತ್ರ’ಪತ್ರಿಕೆ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಸವಕೇಂದ್ರ ಆಶಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.