Malenadu Mitra
ರಾಜ್ಯಶಿವಮೊಗ್ಗ

ಬಿಪಿಎಲ್ ಕಾರ್ಡ್ಗೆ ಕಲ್ಲೂರು ಮೇಘರಾಜ್ ಆಗ್ರಹ

 ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿರುವವರಿಗೆ ಕೂಡಲೇ ಕಾರ್ಡ್ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಾಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಠಿ ಕಲ್ಲೂರು ಮೇಘರಾಜ್ ಆಗ್ರಹಿಸಿದ್ದಾರೆ.
 ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ2,55,361 ಬಡವರು ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಫಲಾನುಭವಿಗಳನ್ನು ಗುರುತಿಸಲು ಸಾಧ್ಯವಾಗಿರಲಿಲ್ಲ. ಆದರೆ ಹೀಗ ಸಹಜ ಸ್ಥಿತಿಗೆ ಬಂದಿರುವುದರಿಂದ ಆಹಾರ ಸಚಿವರು ಈ ಬಗ್ಗೆ ಗಮನಹರಿಸಿ ಯಾರು ಅರ್ಹರೋ ಅವರಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಿ ಎಂದರು.
ರಾಜ್ಯದಲ್ಲಿ ೨೦೧೯ ಏಪ್ರಿಲ್ನಿಂದ ಕಾರ್ಡ್ ವಿತರಿಸಿರುವುದನ್ನು ರಾಜ್ಯಸರ್ಕಾರ ನಿಲ್ಲಿಸಿದೆ. ಇದರಿಂದ ಬಡವರಿಗೆ ತುಂಬಾ ತೊಂದರೆಯಾಗುತ್ತಿದೆ. ಆರೋಗ್ಯ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ಬೇಕೇ ಬೇಕು. ವಿವಿಧ ಪಿಂಚಣಿ ಪಡೆಯಲು ಕೂಡ ಬಿಪಿಎಲ್ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಹಾಗಾಗಿ ಸರ್ಕಾರ ಕೂಡಲೇ ಹೊಸದಾಗಿ ಅರ್ಜಿ ಸಲ್ಲಿಸಿರುವವರಿಗೆ ಬಿಪಿಎಲ್ ಕಾರ್ಡ್ ನೀಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಠಿನ ಮುಖಂಡರಾದ ಹೊಳೆ ಮಡಿಲು ವೆಂಕಟೇಶ್, ಎಸ್.ವಿ.ರಾಜಮ್ಮ, ಹೆಚ್.ಎಂ.ಸಂಗಯ್ಯ, ಶಂಕರನಾಯಕ್, ಗೋಪಾಲಕೃಷ್ಣ ಇದ್ದರು.

Ad Widget

Related posts

ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಕಾರ್ಯಕ್ರಮ, ಕುದರೂರು ಗ್ರಾಮ ಪಂಚಾಯಿತಿಯಲ್ಲಿ ನಿವೃತ್ತ ಯೋಧ ಮತ್ತು ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ

Malenadu Mirror Desk

ದೇಶದಲ್ಲಿ ವಿದ್ಯಾವಂತರು ಹೆಚ್ಚಿದ್ದರಿಂದ ನಿರುದ್ಯೋಗ ಹೆಚ್ಚಿದೆಯಂತೆ, ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂಬ ಮಾಹಿತಿಯೂ ಇಲ್ಲವಂತೆ
ಶಿವಮೊಗ್ಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉವಾಚ

Malenadu Mirror Desk

ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಬೇಡ: ರೈತರ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.