Malenadu Mitra
ರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಹೆಸರಿಡಲು ಆಗ್ರಹ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹೆಸರಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಂಡ ಧೀಮಂತ ರಾಜಕಾರಣಿ. ಉತ್ತಮ ಆಡಳಿತಗಾರ, ಕನ್ನಡ ಭಾಷೆ, ನೆಲ, ಜಲಕ್ಕಾಗಿ ಜನಪರ ಕಾಳಜಿ ಹೊಂದಿದ್ದ ಹೊಸ ಚಿಂತನೆ ರೂಪಿಸಿ ಜಾರಿಗೆ ತಂದವರು ಬಂಗಾರಪ್ಪ, ಅಕ್ಷಯ, ಆಶ್ರಯ, ಶುಶ್ರೂಷ, ಆರಾಧನಾ ಯೋಜನೆ, ರೈತರಿಗಾಗಿ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದ್ದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದರು. ಹೀಗೆ ಹಲವು ಯೋಜನೆ ಜಾರಿಗೆ ತಂದ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ವಿನಯ್ ಕೆ.ಸಿ. ರಾಜಾವತ್, ಜೀವನ್ ಯು.ಎಸ್., ವೆಂಕಟೇಶ್ ನಾಯ್ಕ್, ಸೈಯದ್, ಚಂದನ್, ಪವನ್ ಮೊದಲಾದವರಿದ್ದರು.

Ad Widget

Related posts

ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ನಿರಂತರ ಹೋರಾಟ, ಜನ್ಮದಿನ ಆಚರಿಸಿಕೊಂಡ ಮಾಜಿ ಶಾಸಕ ಮಧುಬಂಗಾರಪ್ಪ ಸಂಕಲ್ಪ

Malenadu Mirror Desk

ಬೆವರಿನ ಶ್ರಮಕ್ಕೆ ಬೆಲೆ ಕೊಡದ ಸಂಪತ್ತು ಶೂನ್ಯಕ್ಕೆ ಸಮಾನ

Malenadu Mirror Desk

ಗ್ರಾಮ ಪಂಚಾಯಿತಿ ಜಾಗಗಳಲ್ಲಿ ಮೊಬೈಲ್ ಟವರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.