Malenadu Mitra
ರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಹೆಸರಿಡಲು ಆಗ್ರಹ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹೆಸರಿಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಂಡ ಧೀಮಂತ ರಾಜಕಾರಣಿ. ಉತ್ತಮ ಆಡಳಿತಗಾರ, ಕನ್ನಡ ಭಾಷೆ, ನೆಲ, ಜಲಕ್ಕಾಗಿ ಜನಪರ ಕಾಳಜಿ ಹೊಂದಿದ್ದ ಹೊಸ ಚಿಂತನೆ ರೂಪಿಸಿ ಜಾರಿಗೆ ತಂದವರು ಬಂಗಾರಪ್ಪ, ಅಕ್ಷಯ, ಆಶ್ರಯ, ಶುಶ್ರೂಷ, ಆರಾಧನಾ ಯೋಜನೆ, ರೈತರಿಗಾಗಿ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದ್ದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದರು. ಹೀಗೆ ಹಲವು ಯೋಜನೆ ಜಾರಿಗೆ ತಂದ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ವಿನಯ್ ಕೆ.ಸಿ. ರಾಜಾವತ್, ಜೀವನ್ ಯು.ಎಸ್., ವೆಂಕಟೇಶ್ ನಾಯ್ಕ್, ಸೈಯದ್, ಚಂದನ್, ಪವನ್ ಮೊದಲಾದವರಿದ್ದರು.

Ad Widget

Related posts

ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲು ಒತ್ತಾಯ

Malenadu Mirror Desk

ಅಮ್ಮನ ಕಾರ್ಯಕ್ಕೆ ಬಂದ ಕುಟುಂಬದ ಜತೆ ಬಂತು ಬ್ರಿಟನ್ ಕೊರೊನ

Malenadu Mirror Desk

ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ: ಕಿಮ್ಮನೆ ರತ್ನಾಕರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.