Malenadu Mitra
ರಾಜ್ಯಶಿವಮೊಗ್ಗಸಾಗರ

ಕರೂರು ಹೋಬಳಿಯಲ್ಲಿ ಹಾಲಿ-ಮಾಜಿ ಶಾಸಕರ ಮಿಂಚಿನ ಸಂಚಾರ

ಸಾಗರದ ಹಾಲಿ ಹಾಗೂ ಮಾಜಿ ಶಾಸಕರುಗಳು ಗುರುವಾರ ಕರೂರು ಹಾಗೂ ಬಾರಂಗಿ ಹೋಬಳಿಯಲ್ಲಿ ಮಿಂಚಿನ ಸಂಚಾರ ನಡೆಸಿದರು. ಶಾಸಕ ಹಾಗೂ ಎಂ.ಎಸ್.ಐ.ಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು, ತುಮರಿ ಪಂಚಾಯಿತಿ ಆವರಣದಲ್ಲಿ ಕೊರೊನ ಸಂಕಷ್ಟದಿಂದ ಆರ್ಥಿಕ ನಷ್ಟ ಅನುಭವಿಸಿದ ಜನರಿಗೆ ಪಡಿತರ ಕಿಟ್ ವಿತರಿಸಿದರು. ಬಳಿಕ ಅವರು ತುಮರಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲ್ಕಟ್ ಸೇತುವೆ ಕಾಮಗಾರಿ ವೀಕ್ಷಿಸಿದರು. ಇತ್ತೀಚೆಗೆ ಕೋವಿಡ್ ನಿಂದ ನಿಧನರಾದ ಕಿಡದುಂಬೆ ಲೋಹಿತ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ವಿದ್ಯುತ್ ತಂತಿ ತಗಲು ನಿಧನರಾಗಿದ್ದ ಜಯೇಂದ್ರ ಜೈನ್ ಹಾಗೂ ಹೃದಯಾಘಾತದಿಂದ ನಿಧನರಾಗಿದ್ದ ಮಿಂಚ ಗ್ರಾಮದ ಹರೀಶ್ ಮನೆಗೂ ಭೇಟಿ ನೀಡಿದ್ದ ಹಾಲಪ್ಪ ಅವರು ಅಕಾಲಿಕ ಮರಣಹೊಂದಿದ್ದ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಶಾಸಕರೊಂದಿಗೆ ಸ್ಥಳೀಯ ಮುಖಂಡರು ಹಾಜರಿದ್ದರು.

ಬೇಳೂರು ಅವರಿಂದ ದಿನಸಿ ಕಿಟ್ ಹಂಚಿಕೆ

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಅಭಿಮಾನಿಗಳ ಸಂಘದಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ತುಮರಿ ಮತ್ತು ಬ್ಯಾಕೋಡು ವ್ಯಾಪ್ತಿಒಯ ಬಡವರಿಗೆ ದಿನಸಿ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭ ಮುಖಂಡರುಗಳಾದ ಸೋಮಶೇಖರ್ ಲ್ಯಾವಿಗೆರೆ, ಜಿ.ಟಿ.ಸತ್ಯನಾರಾಯಣ, ಗಂಟೆ ಹರೀಶ್, ಗಣಪತಿ ಮಂಡಗಳಲೆ, ಶ್ರೀಕಾಂತ್ ಕುರುವರಿ,ಸಂತೋಷ್ ಮತ್ತಿತರರು ಹಾಜರಿದ್ದರು.

Ad Widget

Related posts

ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಶಕ್ತಿಪೂಜೆ

Malenadu Mirror Desk

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್

Malenadu Mirror Desk

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಬೇಕು:ಜಿಲ್ಲಾಧಿಕಾರಿ ಸೆಲ್ವಮಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.