Malenadu Mitra
ರಾಜ್ಯಶಿವಮೊಗ್ಗಹೊಸನಗರ

ಅಕ್ಕ-ತಂಗಿಯನ್ನು ಬಲಿ ಪಡೆದ ಮಹಾಮಾರಿ ಒಂದೇ ಕುಟುಂಬದ 7 ಮಂದಿಗೆ ಸೋಂಕು

ಮಹಾಮಾರಿ ಕೊರೊನಕ್ಕೆ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ಕ ತಂಗಿ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ವರದಿಯಾಗಿದೆ.

ಇಲ್ಲಿನ ಕ್ರಿಶ್ಚಿಯನ್ ಕಾಲೋನಿಯಲ್ಲಿ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಅದರಲ್ಲಿ ವ್ಯಾನಿ ಗೊನ್ಸಾಲ್ವಿಸ್ (59) ಮತ್ತು ಅಪ್ಪಿ ಗೊನ್ಸಾಲ್ವಿಸ್ (52) ಗುರುವಾರ ಬೆಳಗ್ಗೆಯಿಂದ ಸಂಜೆಯ ಒಳಗೆ ನಿಧನರಾಗಿದ್ದಾರೆ. ಮೂರು ದಿನದ ಹಿಂದೆ ಕೊರೊನಾ ಟೆಸ್ಟ್‍ಗೆ ಈ ಕುಟುಂಬ ಒಳಗಾಗಿದ್ದು 7 ಜನರ ವರದಿ ಪಾಸಿಟಿವ್ ಬಂದಿತ್ತು.
ನಂತರ ಕ್ರಿಶ್ಚಿಯನ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಹೋದರಿಯರಿಗೆ ಸೋಂಕಿನ ತೀವ್ರತೆ ಹೆಚ್ಚಿದ ಕಾರಣ ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಬ್ಬರಿಗೂ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡು ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆಲವೇ ಗಂಟೆಯ ಅಂತರದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

Ad Widget

Related posts

ಶಿವಮೊಗ್ಗ ಆಯುರ್ವೇದಿಕ್‌ ಕಾಲೇಜಿಗೆ ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ

Malenadu Mirror Desk

ಶಿವಮೊಗ್ಗದಲ್ಲಿ 846 ಕೊರೊನ ಪ್ರಕರಣ, 6 ಸಾವು

Malenadu Mirror Desk

ಕೃಷಿ ಕ್ಷೇತ್ರದ ಕತ್ತು ಹಿಸುಕಿದ ಕೊರೊನ : ಕಲ್ಲಂಗಡಿ, ಶುಂಠಿ, ಭತ್ತದ ಮಾರುಕಟ್ಟೆ ಕಸಿದ ಮಹಾಮಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.