Malenadu Mitra
ರಾಜ್ಯ ಶಿವಮೊಗ್ಗ ಸಾಗರ

ವಾರಾಂತ್ಯ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

     ಶಿವಮೊಗ್ಗ,ಆ:೫: ವಾರಾಂತ್ಯದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂದಿಸಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಧರ್ಮದರ್ಶಿಗಳಾದ ಡಾ.ಎಸ್.ರಾಮಪ್ಪ ಅವರು, ಕೋವಿಡ್ ನಿಯಂತ್ರಣದ ಉದ್ದೇಶದಿಂದ ಜಿಲ್ಲಾಡಳಿತ ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ನಿಗದಿ ಮಾಡಿರುವ ಕಾರಣ ಶ್ರೀಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಭಕ್ತರ ಸುರಕ್ಷತೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಭಕ್ತಜನರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

ದರ್ಶನಕ್ಕೆ ಮಾತ್ರ ಅವಕಾಶ

ಅದೇ ರೀತಿ ಆಗಸ್ಟ್ ೬ ರಿಂದ ೧೩ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Ad Widget

Related posts

ಶಿವಮೊಗ್ಗದಲ್ಲಿ ಭಾರೀ ಮಳೆ,ಮನೆಗಳಿಗೆ ನೀರು

Malenadu Mirror Desk

ಸಿಗಂದೂರು ಲಾಂಚ್‍ನಿಂದ ಹೊಳೆಗೆ ಹಾರಿದ ಮಹಿಳೆ, ಆತ್ಮಹತ್ಯೆ ತಪ್ಪಿಸಿದ ಸ್ಥಳೀಯ ಸಾಹಸಿ ಯುವಕರು

Malenadu Mirror Desk

ನ್ಯಾಯಾಲಯದ ಆದೇಶ ಪಾಲಸುತ್ತೇವೆ :ಆಡಳಿತಮಂಡಳಿ ಹಿಜಾಬ್ ತೆಗೆಯುವುದಿಲ್ಲ, ಬೇಕಿದ್ದರೆ ವಿಷ ಕುಡಿತೇವೆ: ವಿದ್ಯಾರ್ಥಿನಿಯರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.