Malenadu Mitra
ರಾಜ್ಯಶಿವಮೊಗ್ಗಸಾಗರಸೊರಬ

ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇಲ್ಲ

ಶಿವಮೊಗ್ಗ ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯು ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಸಂಬಂಧ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ನಡೆದ ಹಿಂದೂ ಮಹಾ ಮಂಡಳಿಯ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಎಂದರೆ ಜಿಲ್ಲೆಯ ಯುವಜನರು ಹಾಗೂ ಭಕ್ತರಿಗೆ ಸಂಭ್ರಮದ ದಿನವಾಗಿತ್ತು. ಈ ರಾಜಬೀದಿ ಉತ್ಸವದಂದು ಪೊಲೀಸ್ ಬಿಗಿ ಭದ್ರತೆ ಮಾಡುವುದೂ ಒಂದು ಸವಾಲಿನ ಪ್ರಶ್ನೆಯಾಗಿರುತ್ತಿತ್ತು. ಮೆರವಣಿಗೆ ವೇಳೆ ಗಲಾಟೆ ಆ ಬಳಿಕ ಅದು ಕೋಮು ಸಂಘರ್ಷ ಬಣ್ಣಕ್ಕೆ ತಿರುಗಿದ ಇತಿಹಾಸವೇ ಇದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಶಾಂತಿಯುತ ಮೆರವಣಿಗೆ ನಡೆಯುತಿತ್ತು. ಕೊರೊನ ಕಾರಣಕ್ಕೆ ಈ ವರ್ಷವೂ ರಾಜಬೀದಿ ಉತ್ಸವ ರದ್ದು ಮಾಡಲು ಮಂಡಳಿ ನಿರ್ಣಯಿಸಿದೆ.

ಸಭೆಯಲ್ಲಿ ಹಿಂದೂ ಮಹಾಸಭಾ ಮಂಡಳಿ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್, ಸತ್ಯನಾರಾಯಣ, ಗೋಪಾಲಸ್ವಾಮಿ, ನಿರಂಜನ್, ದತ್ತಾತ್ರೇಯ ರಾವ್ ಹಾಗೂ ಮಂಡಳಿಯವರು ಉಪಸ್ಥಿತರಿದ್ದರು.

Ad Widget

Related posts

ಫೆ.8,9: ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ

Malenadu Mirror Desk

ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ಆರಂಭ

Malenadu Mirror Desk

ನ್ಯಾಯಾಧೀಶರಿಗೆ ರಾಜಕೀಯ ಅಧಿಕಾರ ನೀಡಿದರೆ ತಪ್ಪು ಸಂದೇಶ, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.