Malenadu Mitra
ರಾಜ್ಯಶಿವಮೊಗ್ಗ

ಉತ್ತಮ ಜೀವನಶೈಲಿಯೊಂದಿಗೆ ಹೃದಯದ ಕಾಳಜಿಗೆ ಡಾ.ಸಿದ್ದಪ್ಪ ಸಲಹೆ

ವಿಶ್ವ ಹೃದಯ ದಿನಾಚರಣೆ

ಆರೋಗ್ಯವಾಗಿರಲು  ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರು
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಸುಬ್ಬಯ್ಯ ಇವರ ಸಂಯುಕ್ತಾಶ್ರಯದಲ್ಲಿ   ನಗರದ ಸಿಮ್ಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ಸೇರಿದಂತೆ ಎಲ್ಲ ವಯೋಮಾನದ ಜನರು ಪ್ರಸ್ತುತ ಹೃದ್ರೋಗ, ಹೃದಯಾಘಾತಕ್ಕೆ ಹೆಚ್ಚು ತುತ್ತಾಗುತ್ತಿದ್ದಾರೆ. ಆದ ಕಾರಣ ಸುಸ್ತು, ಬೆವರುವುದು, ಮೇಲ್ಭಾಗದ ಹೊಟ್ಟೆಯಲ್ಲಿ ತೊಂದರೆಯುಂಟಾದರೆ ತಾವೇ ಗ್ಯಾಸ್ ಅಥವಾ ಇತರೆ ಸಮಸ್ಯೆ ಇರಬಹುದು ಎಂದು ಸ್ವಯಂ ಔಷಧೋಪಚಾರ ಮಾಡುವ ಬದಲು ತಕ್ಷಣ ಇಸಿಜಿ ಮಾಡಿಸಬೇಕೆಂದು ಸಲಹೆ ನೀಡಿದರು.


      ೨೦೧೨-೧೩ ನೇ ಸಾಲಿನಿಂದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಹೃದ್ರೋಗ ವಿಭಾಗ ಆರಂಭಿಸಲು ಪ್ರಯತ್ನಿಸಲಾಗಿದ್ದು ಪ್ರಸಕ್ತ ಸಾಲಿನಲ್ಲಿ ಇದು ಸಾಕಾರಗೊಂಡಿದೆ. ಸಂಸ್ಥೆಯಲ್ಲಿ ಉತ್ತಮ ಕಾರ್ಡಿಯಾಲಜಿ ವಿಭಾಗ ಸ್ಥಾಪನೆಗೊಂಡಿದೆ. ಇದಕ್ಕೆ ಸಹಕರಿಸಿದ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇನ್ನೊಂದು ವರ್ಷದಲ್ಲಿ ಎಂಸಿಎ ನಿಯಮಾವಳಿಯನ್ವಯ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಲಾಗುವುದು. ಈಗಾಗಲೇ ೦೪ ಜನ ಕಾರ್ಡಿಯಾಲಜಿ ತಜ್ಞ ವೈದ್ಯರನ್ನು ನೇಮಿಸಲು ಅಧಿಸೂಚಿಸಲಾಗಿದೆ. ಈ ನಾಲ್ಕು ಹುದ್ದೆ ತುಂಬಿದರೆ ಪೂರ್ಣ ಪ್ರಮಾಣದಲ್ಲಿ ವಿಭಾಗ ಕೆಲಸ ಮಾಡಬಹುದು. ಜೊತೆಗೆ ೫೦ ಬೆಡ್ ಹೃದ್ರೋಗ ಆಸ್ಪತ್ರೆ ಮಂಜೂರಾಗಿದ್ದು ಅನುಸರಣೆ ಹಂತದಲ್ಲಿದೆ. ರೇಡಿಯಾಲಜಿ ವಿಭಾಗ ಕೂಡ ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ. ಸಂಸ್ಥೆಯಲ್ಲಿ ಉತ್ತಮ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದಾರೆ. ಆದರೆ ಶುಶ್ರೂಷಕರ ೯೫ ಹುದ್ದೆ ಖಾಲಿ ಇದ್ದು ಈ ಹುದ್ದೆಗಳನ್ನು ತುಂಬುವ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದ ಅವರು, ಸರ್ಕಾರ ಸಂಸ್ಥೆಗೆ ೧೫೦ ‘ಡಿ’ ಗ್ರೂಪ್ ಹುದ್ದೆಯನ್ನು ಮಂಜೂರು ಮಾಡಿರುವುದು ಸಂತಸದ ವಿಚಾರ ಎಂದರು.


ಸಿಮ್ಸ್ ಕಾರ್ಡಿಯಾಲಜಿ ವಿಭಾಗದ ಡಾ.ಪರಮೇಶ್ವರಪ್ಪ ಡಿ.ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲಪ್ಪ ಓ, ಆರ್‍ಸಿಹೆಚ್‌ಓ ನಾಗರಾಜ್ ನಾಯಕ್, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಡಾ.ಕಟ್ಟಿ.ಎಂ.ಡಿ, ಡಾ.ಮಹೇಶ್ ಮೂರ್ತಿ, ಇತರೆ ವೈದ್ಯರು ಉಪಸ್ಥಿತರಿದ್ದರು. ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್.ಎಸ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಹಿಮ ಮತ್ತು ಅನುಕೂಲ್ ನಿರೂಪಿಸಿದರು. ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ವಂದಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ವಿಶ್ವದಲ್ಲಿ ಪ್ರಸ್ತುತ ಸುಮಾರು ೫೨೦ ಮಿಲಿಯನ್ ಜನರು ಒಂದಲ್ಲ ಒಂದು ರೀತಿಯ ಹೃದ್ರೋಗಕ್ಕೆ ಒಳಗಾಗಿದ್ದಾರೆ. ಶೇ.೮೦ ಸಾವು ಹೃದಯ ಸ್ತಂಭನ ಮತ್ತು ಹೃದ್ರೋಗಕ್ಕೆ ಸಂಬಂಧಿಸಿದಂತೆ ಸಂಭವಿಸುತ್ತಿದೆ. ೨೫ ವರ್ಷದೊಳಗಿನ ಯುವಜನತೆ ಸಹ ಹೃದ್ರೋಗಕ್ಕೆ ಒಳಗಾಗುತ್ತಿರುವುದು ಖೇದಕರ ಸಂಗತಿಯಾಗಿದ್ದು ಇದಕ್ಕೆಲ್ಲ ಪ್ರಮುಖ ಕಾರಣ ಜೀವನಶೈಲಿ, ತಂಬಾಕು ವಸ್ತುಗಳ ಸೇವನೆ, ಅನಾರೋಗ್ಯಕರ ಆಹಾರ ಪದ್ದತಿ ಮತ್ತು ಒತ್ತಡವಾಗಿದೆ

ಡಾ.ರಾಜೇಶ್ ಸುರಗಿಹಳ್ಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ


Ad Widget

Related posts

ಶಿವಮೊಗ್ಗದಲ್ಲಿ ಇಳಿದ ಕೊರೊನ, 48 ಸೋಂಕು

Malenadu Mirror Desk

ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ

Malenadu Mirror Desk

ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿರುವ ಸಚಿವ ಈಶ್ವರಪ್ಪ:ಕೆಬಿಪಿ ಆರೋಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.