Malenadu Mitra
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.
ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು ಗುರುತಿಸಲಾಗಿದೆ.
ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿವ್ಯಾಜ್ಯದ ವೈಯಕ್ತಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತ ವ್ಯಕ್ತಿ ಪತ್ನಿ,ಎರಡು ಮಕ್ಕಳನ್ನು ಅಗಲಿದ್ದು, ಈ ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಕಾಂಗ್ರೆಸ್‌ನಿಂದ ಮಾತ್ರ ಬಡವರ ಕಲ್ಯಾಣ ಮಾತ್ರ ಸಾಧ್ಯ, ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ

Malenadu Mirror Desk

ಮಲೆನಾಡಿನಾದ್ಯಂತ ಸಡಗರ ಸಂಭ್ರಮದ ಗೌರಿ ಹಬ್ಬ, ತವರಲ್ಲಿನ ಬರದ ಛಾಯೆಗೆ ಮರುಗಿದ ಹೆಣ್ಣುಮಕ್ಕಳು,

Malenadu Mirror Desk

ಶಿವಮೊಗ್ಗದಲ್ಲಿ 8ಸಾವು, 447 ಸೋಂಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.