Malenadu Mitra
ರಾಜ್ಯಶಿವಮೊಗ್ಗ

ಭೀಕರ ರಸ್ತೆ ಅಪಘಾತ !,ದೇವರು ದೊಡ್ಡವನು, ಪುಣ್ಯ ಯಾರಿಗೆ ಏನು ಆಗಲಿಲ್ಲ!

ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಸರ್ಕಲ್ ಬಳಿ ಡಸ್ಟರ್ ಕಾರು ಹಾಗೂ ಖಾಸಗಿ ಬಸ್ ನಡುವೆ ಗುರುವಾರ ಭೀಕರ ಅಪಘಾತ ಸಂಭವಿಸಿದೆ. ಶಂಕರಘಟ್ಟ ಕಡೆಯಿಂದ ಬರುತಿದ್ದ ಮಹಿಳೆಯೊಬ್ಬರು ಚಲಾಯಿಸುತಿದ್ದ ಕಾರು ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯಿತು.
ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನ ಗಾಜುಗಳು ಒಡೆದಿದ್ದು, ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತ ಸ್ಥಳಕ್ಕೆ ಸಾರ್ವಜನಿಕರು ದಂಡೇ ಬಂದಿದ್ದು, ಅಲ್ಲಿನ ಭೀಕರತೆ ನೋಡಿ ಕಂಗಾಲಾಗಿದ್ದಾರೆ. ಯಾವುದೇ ಜೀವ ಹಾನಿ ಆಗಿಲ್ಲ ಎಂಬ ಸುದ್ದಿ ಕೇಳಿ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.

Ad Widget

Related posts

ಶಿಕಾರಿಪುರದಲ್ಲಿ ಕುರುಬ ಸಮಾಜದ ಸಮಾವೇಶ

Malenadu Mirror Desk

ಪತ್ರಿಕಾ ಮಾಧ್ಯಮ ಪ್ರತಿಪಕ್ಷದಂತೆ ಕೆಲಸ ಮಾಡಬೇಕು, ಪತ್ರಿಕಾ ದಿನಾಚರಣೆ, ಅಭಿನಂದನೆ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಆಶಯ

Malenadu Mirror Desk

ಮಧು ಬಂಗಾರಪ್ಪಅವರಿಗೆ ಅದ್ದೂರಿ ಸ್ವಾಗತ: ಬೈಕ್ ರ್‍ಯಾಲಿ, ಅಭಿನಂದನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.