Malenadu Mitra
ರಾಜ್ಯಶಿವಮೊಗ್ಗ

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಹಿಡಿದ ವಿ.ಹೆಚ್. ಮುನೇಶಪ್ಪ

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಭಾನುವಾರ  ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ ಸಾಹಸಪಟ್ಟು ಬೈಕ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ. ಸುಮಾರು ದೂರದವರೆಗೆ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ.
ಆ ಸಂದರ್ಭದಲ್ಲಿ ಕರ್ತವ್ಯ ಮುಗಿಸಿ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಮುನೇಶಪ್ಪ ಸರಗಳ್ಳರ ಬೆನ್ನತ್ತಿದ್ದಾರೆ. ರೆಲ್ವೇ ಟ್ರ್ಯಾಕ್ ಪಕ್ಕದ ಚಾನಲ್ ರಸ್ತೆ ಮೂಲಕ ಶರಾವತಿ ನಗರದವರೆಗ ಸರಗಳ್ಳರನ್ನು ಬೆನ್ನಟ್ಟಿದಾಗ ಶರಾವತಿ ನಗರದಲ್ಲಿ ಕಳ್ಳರ ಬೈಕ್ ನ ಪೆಟ್ರೋಲ್ ಖಾಲಿಯಾಗಿದ್ದರಿಂದ ಬೈಕ್ ಅಲ್ಲೇ ಬಿಟ್ಟು ಓಡಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಹಿಡಿಯಲೆತ್ನಿಸಿದ ಮುನೇಶಪ್ಪನ ಮೇಲೆ ಚಾಕುವಿನಿಂದ ಹಲ್ಲೆಗೂ ಯತ್ನಿಸಿದ್ದಾರೆ. ಆದರೂ ಚಾಕಚಕ್ಯತೆಯಿಂದ ಆರೋಪಿ ಮೊಹಮ್ಮದ್ ಶಾರುಖ್ ನನ್ನು ಹಿಡಿದು ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಬಳಿ ಇದ್ದ ಚಾಕು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ಬಂಧನಕ್ಕೆ ಬಲೆ ಬೀಸಿದ್ದಾರೆ.

Ad Widget

Related posts

ಬಂಜಾರ ಸಮಾಜದ ಏಳಿಗೆಗೆ ಅನುದಾನ : ಯಡಿಯೂರಪ್ಪ ಭರವಸೆ
ಬಂಜಾರ ಕನ್ವೆನ್ಶನಲ್ ಹಾಲ್ ಲೋಕಾರ್ಪಣೆ

Malenadu Mirror Desk

ಭದ್ರಾವತಿಯಲ್ಲಿ ಬಿಜೆಪಿ ಮತಪ್ರಚಾರ

Malenadu Mirror Desk

ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61ಕೋಟಿ ರೂ. ಕ್ರಿಯಾ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.