Malenadu Mitra
ರಾಜ್ಯಶಿವಮೊಗ್ಗ

ಓಂ ಶಕ್ತಿ ಯಾತ್ರಿಕರೊಂದಿಗೆ ಬಂದ ಕೊರೊನ : ಶಿವಮೊಗ್ಗದಲ್ಲಿ6 ಮಂದಿ ಭಕ್ತರಲ್ಲಿ ಸೋಂಕು ಪತ್ತೆ

ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ ಶಿವಮೊಗ್ಗದ ಆರು ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕು ದೃಢವಾದ ಆರು ಮಂದಿ ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ಶಿವಮೊಗ್ಗದಿಂದ 82 ಬಸ್ಸುಗಳಲ್ಲಿ 4300 ಕ್ಕೂ ಹೆಚ್ಚು ಮಹಿಳೆಯರು ತೆರಳಿದ್ದರು. ಯಾತ್ರೆ ಮುಗಿಸಿ ಬಂದ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಯಾತ್ರೆಗೆ ತೆರಳಿದ್ದ ಎಲ್ಲರನ್ನೂ ಹೊಂ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಹೋಂ ಕ್ವಾರಂಟೈನ್‌ನಲ್ಲಿದ್ದವರನ್ನು ಇದೀಗ ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಮೇಲ್ವಿಚಾರಣೆ ವೇಳೆ ಶುಕ್ರವಾರ ಬೆಳಗ್ಗೆ ಆರು ಜನರಲ್ಲಿ ಕೋವಿಡ್ ಪಾಸಿಟಿವ್ ದೃಢವಾಗಿದೆ. ಅವರಿಗೆ ಇದೀಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಮಂಡ್ಯದ ಕೆಲವು ಮಹಿಳೆಯರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡ ಬಗ್ಗೆ ಬಂದ ಸುದ್ದಿಯಿಂದ ಇಲ್ಲಿನ ಯಾತ್ರಿಕರಲ್ಲಿ ಆತಂಕ ಮೂಡಿದ್ದು, ಅದೀಗ ನಿಜವಾಗಿದೆ.

Ad Widget

Related posts

ಪ್ರಧಾನಿ ಮೋದಿ ಅವರಿಂದ ಭಾರತ ಮತ್ತಷ್ಟು ಬಲಿಷ್ಠ , ಕೇಂದ್ರ ಸರಕಾರಕ್ಕೆ 8 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರದ ಸಾಧನೆ ಕೊಂಡಾಡಿದ ಸಂಸದ ರಾಘವೇಂದ್ರ

Malenadu Mirror Desk

ಸಾಗರಕ್ಕೂ ಬಂತು ಆಣೆ ಪ್ರಮಾಣ ರಾಜಕಾರಣ , ಬೇಳೂರು ಸವಾಲು ಸ್ವೀಕರಿಸಿದ ಹಾಲಪ್ಪ, ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ದಿನ ನಿಗದಿ

Malenadu Mirror Desk

ಶಿವಮೊಗ್ಗದಲ್ಲಿ ಮೊದಲ ಲಸಿಕೆ ಯಾರು ತಗೊಂಡ್ರು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.