Malenadu Mitra
ರಾಜ್ಯಶಿವಮೊಗ್ಗ

ಶನಿವಾರ, ಭಾನುವಾರ ಸಿಗಂದೂರು ದೇಗುಲ ಬಂದ್

ಶಿವಮೊಗ್ಗ,ಜ.೭: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆಯಾಗಿರುವುದರಿಂದ ಸಾಗರ ತಾಲೂಕು ಸಿಗಂದೂರು ಚೌಡೇಶ್ವರಿ ದೇವಾಲಯವು ಶನಿವಾರ ಮತ್ತು ಭಾನುವಾರ ಸಂಪೂರ್ಣ ಸ್ಥಗಿತವಾಗಿರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಈ ದಿನಗಳಲ್ಲಿ ದೇಗುಲ ಬಂದ್ ಇರುವುದರಿಂದ ಯಾವುದೇ ಭಕ್ತಾದಿಗಳಿಗೆ ಕ್ಷೇತ್ರಕ್ಕೆ ಪ್ರವೇಶ ಇರುವುದಿಲ್ಲ. ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ನಿಯಮಾನುಸಾರ ನಿತ್ಯ ಧಾರ್ಮಿಕ ವಿಧಿವಿದಾನಗಳು ನಡೆಯಲಿದ್ದು, ಭಕ್ತಾದಿಗಳ ಭೇಟಿಗೆ ಅವಕಾಶವಿದೆ, ಸಾರ್ವಜನಿಕರು ಸಹಕರಿಸಬೇಕೆಂದು ಶ್ರೀ ಕ್ಷೇತ್ರದ ಆಡಳಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ

Ad Widget

Related posts

ಆರೋಗ್ಯ ಸಮಸ್ಯೆ: ಮನನೊಂದಿದ್ದ ಯುವತಿ ಆತ್ಮಹತ್ಯೆ

Malenadu Mirror Desk

ಪೊಲೀಸ್ ತುರ್ತು ಸೇವೆಗೆ ಡಯಲ್-112

Malenadu Mirror Desk

ಸಂವಿಧಾನದಲ್ಲಿ ಅಗ್ರಮಾನ್ಯ ಸ್ಥಾನ ಮಾನವ ಹಕ್ಕಿಗಿದೆ: ನ್ಯಾಯಾಧೀಶೆ ಕೆ. ಎನ್. ಸರಸ್ವತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.